ಕೊಂಡಾಣ ಕ್ಷೇತ್ರದ ನಿರ್ಮಾಣ ಹಂತದ ಭಂಡಾರಮನೆ ನೆಲಸಮ: ಅಷ್ಟಕ್ಕೂ ಆಗಿದ್ದೇನು..?

ಮಂಗಳೂರು, ಮಾರ್ಚ್ 03: ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ಕ್ಷೇತ್ರಕ್ಕೆ ತಾಗಿಕೊಂಡೇ ನೂತನ ಭಂಡಾರಮನೆ ನಿರ್ಮಾಣಗೊಳ್ಳುತ್ತಿದ್ದು, ನಿರ್ಮಾಣ ಹಂತದ ಕಟ್ಟಡವನ್ನ ಕಿಡಿಗೇಡಿಗಳು ಭಾನುವಾರ ಬೆಳಿಗ್ಗೆ ಜೆಸಿಬಿಯಲ್ಲಿ ನೆಲಸಮಗೊಳಿಸಿ ವಿಕೃತಿ ಮೆರೆದಿದ್ದಾರೆ.

ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಪುರಾಣದ ಭಂಡಾರಮನೆಯು ಖಾಸಗಿ ಗುತ್ತಿನ ಮನೆ ಒಡೆತನದಲ್ಲಿದ್ದು ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಳೆ ಬಾಲುವ ಒಡವೆಗಳಿದ್ದು ಭಂಡಾರಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಶತಾಯಗತಾಯ ಪ್ರಯತ್ನಿಸಿದ್ದರು.ಆದರೆ ಇದಕ್ಕೆ ಭಂಡಾರಮನೆಯವರು ಸಮ್ಮತಿ ನೀಡಿರಲಿಲ್ಲ.

Dakshina Kannada Kondana Kshetra Bandara Mane Destroyed

ಆ ಹಿನ್ನಲೆ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣವಾಗಬೇಕೆಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ಕಾರಣ, ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಸಂಪೂರ್ಣಗೊಂಡಿತ್ತು.

ಈಗಿನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಅವಧಿ ಮುಗಿದಿದ್ದು,ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಕಳೆದ ಎರಡು ದಿವಸಗಳ ಹಿಂದಷ್ಟೇ ಅಧಿಕಾರವನ್ನ ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ವಿಮುಕ್ತರಾಗುತ್ತಿದ್ದಂತೆ ಭಾನುವಾರ ಬೆಳಿಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾ ಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ , ಎಸಿಪಿ ಧನ್ಯಾ ನಾಯಕ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಮತ್ತು ಸ್ಥಳೀಯರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

Dakshina Kannada Kondana Kshetra Bandara Mane Destroyed

ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಮಾತನಾಡಿ 'ಭಂಡಾರ ಮನೆ ಒಡೆಯಲು ಗುರಿಕಾರರಾದ ಮುತ್ತಣ್ಣ ಶೆಟ್ಟಿಯೆ ಕಾರಣ ಎಂದು ಎಲ್ಲರಿಗೂ ತಿಳಿದಿದೆ. ಇಲ್ಲಿ ಕಾನೂನು ಪ್ರಕಾರವಾಗಿಯೇ ಭಂಡಾರ ಮನೆ ನಿರ್ಮಿಸಲಾಗಿತ್ತು, ಅದಕ್ಕೆ ಸದಾ ವಿರುದ್ಧವಾಗಿ ಕೋರ್ಟ್‌ನಲ್ಲಿ ಧಾವೆ ಹೂಡುತ್ತಿದ್ದದ್ದು ಮುತ್ತಣ್ಣ ಶೆಟ್ಟಿಯೇ ಆಗಿದ್ದು ಅವರ ಚೇಳಗಳೇ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಕ್ಷೇತ್ರವನ್ನು ದೋಚುವ ಗುರಿಕಾರರ ಅಗತ್ಯತೆ ಇಲ್ಲ. ಇಲ್ಲಿ ಮತ್ತೆ ಭಂಡಾರಮನೆ ಪುನರ್ ನಿರ್ಮಾಣ ಆಗಲೇ ಬೇಕು.ಆ ಮೂಲಕ ದೈವಗಳ ಕೋಟಿಗಟ್ಟಲೆ ಬೆಲೆ ಬಾಳುವ ಒಡವೆಗಳನನ್ನು ಸೇಫ್ ಲಾಕರಲ್ಲಿ ಇಡುವಂತಾಗಬೇಕೆಂದು' ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+