ಜೆಡಿಎಸ್ ಸಹಕಾರದೊಂದಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ:ಐವನ್ ಡಿಸೋಜಾ
ಮಂಗಳೂರು, ಮಾರ್ಚ್ 26:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಯೋಜನೆ ರೂಪಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯನ್ನು ಪ್ರಮುಖವಾಗಿಸಿಕೊಂಡು ಜೆಡಿಎಸ್ ಸಹಕಾರದೊಂದಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಕಣಕ್ಕಿಳಿದ ಬಳಿಕ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ.ಇದೇ ಅಲೆಯನ್ನು ಕೊನೆ ತನಕ ಕೊಂಡೊಯ್ದು ಮತಗಳನ್ನಾಗಿ ಪರಿವರ್ತಿಸಲು ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲು ನಿಷ್ಕ್ರೀಯರಾಗಿದ್ದರೂ ಚೌಕಿದಾರ್ ಪೇಟ ಹಾಕಿ ಸುತ್ತುತ್ತಿದ್ದಾರೆ. ಕ್ಷೇತ್ರದಲ್ಲಿ 10 ವರ್ಷ ಸಂಸದರೇ ಇಲ್ಲದ ಪರಿಸ್ಥಿತಿ ಇತ್ತು. ಈ ಚುನಾವಣೆಯಲ್ಲಿ ನಿಷ್ಕ್ರೀಯ ಸಂಸದರನ್ನು ಮನೆಗೆ ಕಳುಹಿಸಿ ಕಾಂಗ್ರೆಸ್ ನ ಮಿಥುನ್ ರೈ ಅವರನ್ನು ಚುನಾಯಿಸಲು ಜನರು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಗೆದ್ದು, ಕೇಂದ್ರದಲ್ಲಿ ಸರಕಾರ ರಚಿಸಿದರೆ ಮಂಗಳೂರು ರೈಲ್ವೆ ವಲಯ ರಚನೆ, ಬಂದರು ಅಭಿವೃದ್ಧಿ, ವಿಮಾನ ನಿಲ್ದಾಣದ ಖಾಸಗೀಕರಣ ಹಿಂಪಡೆದು, ಸಂಪೂರ್ಣ ಅಭಿವೃದ್ಧಿ, ಮಂಗಳೂರಿನಲ್ಲಿ ಐಐಟಿ ಸ್ಥಾಪನೆ, ವಿಜಯ ಬ್ಯಾಂಕ್ ವಿಲೀನ್ ಪ್ರಕ್ರಿಯೆ ಹಿಂಪಡೆಯುವುದು ಸೇರಿದಂತೆ ಹಲವಾರು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications