ತಂದೆಯನ್ನು ಕೊಂದು ಪರಾರಿಯಾಗಿದ್ದ ಮಗನ ಬಂಧನ
ಮಂಗಳೂರು, ಜನವರಿ. 18 : ಆಸ್ತಿ ವಿಚಾರಕ್ಕೆ ತಂದೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು(ಮಗ) ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಉಪ್ಪಿನಂಗಡಿ ಪೊಲೀಸರ ತಂಡ ಮಂಗಳವಾರ ರಾತ್ರಿ ಬಂಟ್ವಾಳ ತಾಲೂಕಿನ ಗಡಿಯಾರ ಎಂಬಲ್ಲಿ ಬಂಧಿಸಿದ್ದಾರೆ.
ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಅಬೂಬಕರ್ ಯಾನೆ ಮೋನು(35) ಆರೋಪಿ ತನ್ನ ತಂದೆ ಆದಂ (55)ನ್ನು ಆಸ್ತಿ ವಿವಾದಲ್ಲಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡುದ್ದ.[ಉಪ್ಪಿನಂಗಡಿ : ಆಸ್ತಿ ವಿವಾದದಲ್ಲಿ ತಂದೆಯನ್ನೇ ಕೊಂದ ಮಗ]
ಕಳೆದ ಶನಿವಾರ ಉಪ್ಪಿನಂಗಡಿಯ ಹಳೆ ಬಸ್ನಿಲ್ದಾಣದ ಸಮೀಪವಿರುವ ತನ್ನ ತರಕಾರಿ ಅಂಗಡಿಯಲ್ಲಿ ಆಸ್ತಿ ವಿಚಾರವಾಗಿ ತಂದೆ ಆದಂರೊಂದಿಗೆ ಜಗಳವಾಡಿ, ತಂದೆಗೆ ರಾಡ್ ನಿಂದ ಹಲ್ಲೆ ನಡೆಸಿದ್ದ.

ಬಳಿಕ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರವಿವಾರ ತನಕ ಅಲ್ಲಿಯೇ ಇದ್ದ ಆತ ತಂದೆಗೆ ಪ್ರಜ್ಞೆ ಬಾರದಿರುವುದನ್ನು ಗಮನಿಸಿ ಅಲ್ಲಿಂದ ತಲೆಮರೆಸಿಕೊಂಡಿದ್ದ.
ಸೋಮವಾರ ಬೆಳಗ್ಗೆ ಆದಂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಬಳಿಕ ಅಬೂಬಕರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನ ಪತ್ತೆಗೆ ಶೋಧ ಕಾರ್ಯ ನಡೆಸಿದ್ದರು.
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ನಿರ್ದೇಶನದಂತೆ ಆರೋಪಿ ಪತ್ತೆಗಾಗಿ ಪುತ್ತೂರು ಗ್ರಾಮಾಂತರ ಇನ್ಸ್ಪೆಕ್ಟರ್ ಅನಿಲ್ ಕುಲಕರ್ಣಿ, ಅಪರಾಧ ಪತ್ತೆ ದಳದ ಅಮಾನುಲ್ಲಾ ನೇತೃತ್ವದ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.
ಮಂಗಳವಾರ ಬೆಳಗ್ಗೆ ಆರೋಪಿ ಬೆಂಗಳೂರಿಗೆ ಪರಾರಿಯಾಗುವ ವೇಳೆ ಗಡಿಯಾರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಆತನನ್ನು ಬಂಧಿಸಿದ್ದಾರೆ.
ಬಳಿಕ ಹಲ್ಲೆ ನಡೆದ ತರಕಾರಿ ಅಂಗಡಿಗೆ ಆರೋಪಿಯನ್ನು ಕರೆ ತಂದ ಪೊಲೀಸ್ ತಂಡ ಸ್ಥಳ ಮಹಜರು ನಡೆಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications