ದಕ್ಷಿಣ ಕನ್ನಡ: ಪಿಎಫ್ಐ ಸಮಾವೇಶಕ್ಕೆ ಷರತ್ತು ಬದ್ದ ಒಪ್ಪಿಗೆ
10ನೇ ವರ್ಷಾಚರಣೆ ಪ್ರಯುಕ್ತ ಇಂದು (ಫೆಬ್ರವರಿ 17) ರಂದು ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಷರತ್ತು ಬದ್ಧ ಒಪ್ಪಿಗೆ ನೀಡಿದ್ದಾರೆ.
ಮಂಗಳೂರು, ಫೆಬ್ರವರಿ 17: 10ನೇ ವರ್ಷಾಚರಣೆ ಪ್ರಯುಕ್ತ ಇಂದು (ಫೆಬ್ರವರಿ 17) ರಂದು ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಷರತ್ತು ಬದ್ಧ ಒಪ್ಪಿಗೆ ನೀಡಿದ್ದಾರೆ.
ಇದೇ ರೀತಿ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿಯ ಇಳಂತಿಲದಲ್ಲಿ ಮಾತ್ರ ಸಮಾವೇಶಕ್ಕೆ ಅನುಮತಿ ನೀಡಲಾಗಿದೆ. ಇಂದು ಮಧ್ಯಾಹ್ನ 2:30ರಿಂದ ಸಂಜೆ 7 ಗಂಟೆಯೊಳಗೆ ಇಳಂತಿಲ ಎಚ್.ಎಂ. ಮೈದಾನದಿಂದ ಸಮೀಪದ ಮೈದಾನದವರೆಗೆ ಪಥ ಸಂಚಲನ ಮತ್ತು ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಹೊರಾಂಗಣ ಕಾರ್ಯಕ್ರಮಗಳಾದ ಸಭಾ ಕಾರ್ಯಕ್ರಮ, ರ್ಯಾಲಿ, ಪರೇಡ್, ಮಾರ್ಚ್ ಫಾಸ್ಟ್ ಗೆ ಆರಂಭದಲ್ಲಿ ನಿರ್ಬಂಧ ಹೇರಲಾಗಿತ್ತು. ಆದರೆ ನಿನ್ನೆ ಷರತ್ತು ಬದ್ದ ಒಪ್ಪಿಗೆ ನೀಡಲಾಗಿದೆ.[ಪಿಎಫ್ ಐ ಸಮಾವೇಶ, ಉಳ್ಳಾಲದಲ್ಲಿ ನಿಷೇಧಾಜ್ಞೆ ಜಾರಿ]
ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ
ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳಾದ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅತ್ತ ಮುಸ್ಲಿಂ ಬಾಹುಳ್ಯವಿರುವ ಉಳ್ಳಾಲದಲ್ಲಿಯೂ ಸೆಕ್ಷನ್144 ಜಾರಿಗೊಳಿಸಲಾಗಿದೆ. ಫೆಬ್ರವರಿ 17 ರಂದು ಬೆಳಿಗ್ಗೆ 5 ಗಂಟೆಯಿಂದ ಫೆ. 19 ರಂದು ರಾತ್ರಿ 12 ಗಂಟೆವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.[ಮಂಗ್ಳೂರಿನ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಎರಡು ಶವ ಪತ್ತೆ]

ಉಳ್ಳಾಲದಲ್ಲಿ ಪಿಎಫ್ಐ ವಿರುದ್ಧ ಕೇಸ್
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ (ಪಿಎಫ್ಐ) ವಿರುದ್ಧ ಮಂಗಳೂರಿನ ಉಳ್ಳಾಲದಲ್ಲಿ ಕೇಸ್ ಕೂಡಾ ದಾಖಲಾಗಿದೆ.
ಫೆ.17ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಳ್ಳಾಲದಲ್ಲಿ 'ಯುನಿಟಿ ಮಾರ್ಚ್' ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಹೀಗಾಗಿ ಕಳೆದ ಬುಧವಾರ ತಡರಾತ್ರಿ ಆಯೋಜಕರು ಉಳ್ಳಾಲ, ಕಲ್ಲಾಪು, ತೊಕ್ಕೊಟ್ಟು, ಚೆಂಬುಗುಡ್ಡೆ ಭಾಗದಲ್ಲಿ ಸ್ವಾಗತ ಕಮಾನು, ಬ್ಯಾನರ್ ಗಳನ್ನು ಹಾಗೂ ಧ್ವಜಗಳನ್ನು ಪ್ರಚಾರಕ್ಕೆಂದು ಅಳವಡಿಸಿದ್ದರು.

ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಹೀಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಕಮೀಷನರ್ ಅವರ ಆದೇಶದಂತೆ ಪೊಲೀಸರು ಕಮಾನು, ಬ್ಯಾನರ್ ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications