ದಕ್ಷಿಣ ಕನ್ನಡ ಜಿಲ್ಲೆಯ ಕಳೆದ ಐದು ವರ್ಷಗಳ ಕೇಸು ಕೆದಕಲಿರುವ ಪೊಲೀಸರು
ಮಂಗಳೂರು, ಜುಲೈ 14: ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಬರುವ ಐದು ವರ್ಷದ ಹಿಂದಿನ ಎಲ್ಲಾ ಗೂಂಡಾ ಪ್ರಕರಣಗಳ ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಹೇಳಿದ್ದಾರೆ.
ಇಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಬರುವಂತಹ ಯಾವುದೇ ಭಯದ ವಾತಾವರಣ ಜಿಲ್ಲೆಯಲ್ಲಿ ಇಲ್ಲ. ಎಲ್ಲ ಸಹಜ ಸ್ಥಿತಿಯಲ್ಲಿದ್ದು, ಗಲಭೆ ಪೀಡಿತ ಬಂಟ್ವಾಳ, ವಿಟ್ಲ ಹಾಗೂ ಇತರ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದರು.

ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದಂತಹ ಎಲ್ಲ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದು, ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಆರೋಪಿಗಳನ್ನೂ ಕೂಡಲೇ ಬಂಧಿಸುತ್ತೇವೆ. ಕೆಲವು ಮಹತ್ತರ ಸುಳಿವು ಲಭ್ಯವಾಗಿದೆ ಎಂದು ಹೇಳಿದರು.
ಶರತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವ್ಯವಸ್ಥೆಯಲ್ಲಿ ಕೊಂಚ ನ್ಯೂನತೆಗಳು ಇರುರುವುದನ್ನು ಒಪ್ಪಿಕೊಂಡ ಅವರು, ಕಳೆದ ಐದು ವರ್ಷಗಳಲ್ಲಿ ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ನಡೆದ ಗೂಂಡಾ ಪ್ರಕರಣಗಳೆಲ್ಲವನ್ನೂ ಪುನರ್ ಪರಿಶೀಲನೆ ನಡೆಸುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎಂದು ಹೇಳಿದರು.
ಇಂಥ ಪ್ರಕರಣದಲ್ಲಿ ತೊಡಗಿಕೊಂಡಿದ್ದವರು ಇದೀಗ ಏನು ಮಾಡುತ್ತಿದ್ದಾರೆ? ಒಂದು ವೇಳೆ ಸಮಾಜ ವಿದ್ರೋಹಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರೆ ಅಂಥವರ ಮೇಲೆ ಗೂಂಡಾ ಕಾಯ್ದೆ, ಗಡೀಪಾರು ಮಾಡುವುದು ಹಾಗೂ ಕೋಕಾ ಕಾಯ್ದೆಯ ಮೂಲಕ ಕ್ರಮ ಜರಗಿಸುವಂತೆಯೂ ತಿಳಿಸಿರುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳು ಮಾಧ್ಯಮಗಳಲ್ಲಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇಂಥ ಹೇಳಿಕೆಗಳನ್ನು ಪ್ರಸಾರ ಮಾಡಬಾರದು ಎಂದು ಮಾಧ್ಯಮಗಳಿಗೆ ದತ್ತಾ ಮನವಿ ಮಾಡಿದರು.
ತಪ್ಪು ಮಾಡದವರನ್ನು ಪ್ರಕರಣದಲ್ಲಿ ಸಿಲುಕಿಸಲು ಅವಕಾಶ ಇಲ್ಲ. ಇದೇ ಕಾರಣಕ್ಕಾಗಿ ಶರತ್ ಹತ್ಯೆಯ ಆರೋಪಿಗಳ ಪತ್ತೆ ಕಾರ್ಯ ವಿಳಂಬವಾಗಿದೆ ಎಂದರು.
ಎಡಿಜಿಪಿ ಅಲೋಕ್ ಮೋಹನ್, ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಹರಿಶೇಖರನ್, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಇದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications