ಕಾಸರಗೋಡು-ಮಂಗಳೂರು ನಡುವಿನ ದಿನದ ಸಂಚಾರಕ್ಕೆ ಪಾಸ್ ಕಡ್ಡಾಯ
ದಕ್ಷಿಣ ಕನ್ನಡ, ಜೂನ್ 03 : ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳದ ಕಾಸರಗೋಡು ಮತ್ತು ಜಿಲ್ಲೆಯ ನಡುವೆ ಸಂಚಾರ ನಡೆಸುವ ಜನರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರತಿದಿನ ಸಂಚಾರ ನಡೆಸುವ ಜನರು ವಿಶೇಷ ಪಾಸುಗಳನ್ನು ಪಡೆಯಬೇಕಾಗುತ್ತದೆ.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಪ್ರತಿದಿನ ಸಂಚಾರ ನಡೆಸುವ ಉದ್ಯೋಗಿಗಳು/ವಿದ್ಯಾರ್ಥಿಗಳಿಗೆ ದಿನದ ಪಾಸ್ ವಿತರಣೆ ಮಾಡಲಾಗುತ್ತದೆ. ಈ ಪಾಸ್ಗಳ ಅವಧಿ ಜೂನ್ 30ರ ತನಕ ಇರುತ್ತದೆ" ಎಂದು ಹೇಳಿದ್ದಾರೆ.
ದಿನದ ವಿಶೇಷ ಪಾಸು ಪಡೆಯಲು ಅರ್ಜಿ ಸಲ್ಲಿಸುವಾಗ ಭೇಟಿ ನೀಡುವ ಪ್ರದೇಶವನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು. ಉದ್ಯೋಗ ಮಾಡುವವರು ಕಚೇರಿಯ ವಿಳಾಸ ನಮೂದಿಸಬೇಕು. ದಕ್ಷಿಣ ಕನ್ನಡದಲ್ಲಿ ವಾಸವಿರುವ ವಿಳಾಸವನ್ನು ನೀಡಬೇಕಿದೆ.

ತಲಪ್ಪಾಡಿ ಚೆಕ್ ಪೋಸ್ಟ್ನಲ್ಲಿ ಪ್ರತಿದಿನ ಪಾಸು ಇರುವವರನ್ನು ಪರಿಶೀಲಿಸಿ ಒಳಗೆ ಬಿಡಲಾಗುತ್ತದೆ. ಒಂದು ವೇಳೆ ಪಾಸು ತೋರಿಸಲು ವಿಫಲವಾದರೆ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡಕ್ಕೆ ಬರುವ ಎಲ್ಲರನ್ನು ಚೆಕ್ ಪೋಸ್ಟ್ನಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಇಲ್ಲದಿದ್ದರೆ ಮಾತ್ರ ಒಳಗೆ ಬಿಡಲಾಗುತ್ತದೆ. ಕಾಸರಗೋಡು-ದಕ್ಷಿಣ ಕನ್ನಡ ನಡುವೆ ಪ್ರತಿದಿನ ಸಂಚಾರ ನಡೆಸುವವರಿಗೆ ಮಾತ್ರ ಪಾಸು ಇರುತ್ತದೆ. ಉಳಿದಂತೆ ಸಂಚಾರ ನಡೆಸುವವರಿಗೆ ಎಲ್ಲಾ ನಿಯಮ ಅನ್ವಯ ಆಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.
ಮತ್ತೊಂದು ಕಡೆ ಕೊಡಗು ಜಿಲ್ಲಾಡಳಿತ ಸಹ ಅಂತರರಾಜ್ಯಗಳ ನಡುವೆ ಪ್ರತಿದಿನ ಸಂಚಾರ ನಡೆಸುವ ಜನರಿಗಾಗಿ ಪಾಸು ನೀಡಲಿದೆ. ಉಳಿದಂತೆ ಅಂತರರಾಜ್ಯಗಳ ನಡುವೆ ಸಂಚಾರ ನಡೆಸುವ ಜನರು ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕಿದೆ.
ಪಾಸು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications