ಕಾಸರಗೋಡು-ಮಂಗಳೂರು ನಡುವಿನ ದಿನದ ಸಂಚಾರಕ್ಕೆ ಪಾಸ್ ಕಡ್ಡಾಯ
ದಕ್ಷಿಣ ಕನ್ನಡ, ಜೂನ್ 03 : ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳದ ಕಾಸರಗೋಡು ಮತ್ತು ಜಿಲ್ಲೆಯ ನಡುವೆ ಸಂಚಾರ ನಡೆಸುವ ಜನರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರತಿದಿನ ಸಂಚಾರ ನಡೆಸುವ ಜನರು ವಿಶೇಷ ಪಾಸುಗಳನ್ನು ಪಡೆಯಬೇಕಾಗುತ್ತದೆ.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಪ್ರತಿದಿನ ಸಂಚಾರ ನಡೆಸುವ ಉದ್ಯೋಗಿಗಳು/ವಿದ್ಯಾರ್ಥಿಗಳಿಗೆ ದಿನದ ಪಾಸ್ ವಿತರಣೆ ಮಾಡಲಾಗುತ್ತದೆ. ಈ ಪಾಸ್ಗಳ ಅವಧಿ ಜೂನ್ 30ರ ತನಕ ಇರುತ್ತದೆ" ಎಂದು ಹೇಳಿದ್ದಾರೆ.
ದಿನದ ವಿಶೇಷ ಪಾಸು ಪಡೆಯಲು ಅರ್ಜಿ ಸಲ್ಲಿಸುವಾಗ ಭೇಟಿ ನೀಡುವ ಪ್ರದೇಶವನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು. ಉದ್ಯೋಗ ಮಾಡುವವರು ಕಚೇರಿಯ ವಿಳಾಸ ನಮೂದಿಸಬೇಕು. ದಕ್ಷಿಣ ಕನ್ನಡದಲ್ಲಿ ವಾಸವಿರುವ ವಿಳಾಸವನ್ನು ನೀಡಬೇಕಿದೆ.

ತಲಪ್ಪಾಡಿ ಚೆಕ್ ಪೋಸ್ಟ್ನಲ್ಲಿ ಪ್ರತಿದಿನ ಪಾಸು ಇರುವವರನ್ನು ಪರಿಶೀಲಿಸಿ ಒಳಗೆ ಬಿಡಲಾಗುತ್ತದೆ. ಒಂದು ವೇಳೆ ಪಾಸು ತೋರಿಸಲು ವಿಫಲವಾದರೆ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡಕ್ಕೆ ಬರುವ ಎಲ್ಲರನ್ನು ಚೆಕ್ ಪೋಸ್ಟ್ನಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಇಲ್ಲದಿದ್ದರೆ ಮಾತ್ರ ಒಳಗೆ ಬಿಡಲಾಗುತ್ತದೆ. ಕಾಸರಗೋಡು-ದಕ್ಷಿಣ ಕನ್ನಡ ನಡುವೆ ಪ್ರತಿದಿನ ಸಂಚಾರ ನಡೆಸುವವರಿಗೆ ಮಾತ್ರ ಪಾಸು ಇರುತ್ತದೆ. ಉಳಿದಂತೆ ಸಂಚಾರ ನಡೆಸುವವರಿಗೆ ಎಲ್ಲಾ ನಿಯಮ ಅನ್ವಯ ಆಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.
ಮತ್ತೊಂದು ಕಡೆ ಕೊಡಗು ಜಿಲ್ಲಾಡಳಿತ ಸಹ ಅಂತರರಾಜ್ಯಗಳ ನಡುವೆ ಪ್ರತಿದಿನ ಸಂಚಾರ ನಡೆಸುವ ಜನರಿಗಾಗಿ ಪಾಸು ನೀಡಲಿದೆ. ಉಳಿದಂತೆ ಅಂತರರಾಜ್ಯಗಳ ನಡುವೆ ಸಂಚಾರ ನಡೆಸುವ ಜನರು ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕಿದೆ.
ಪಾಸು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications