ದಕ್ಷಿಣ ಕನ್ನಡದಲ್ಲಿ 11 ಮಂದಿ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ
ಮಂಗಳೂರು, ಮಾರ್ಚ್ 15: ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಬೌದ್ಧ ಮತಕ್ಕೆ ಮತಾಂತರಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರ ಗೃಹಪ್ರವೇಶ ಸಂದರ್ಭ 11 ಮಂದಿಗೆ ಬೌದ್ಧ ಧರ್ಮ ದೀಕ್ಷೆ ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾದ ಭಂತೇಜಿ, ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಸುಗತಪಾಲ ಭಂತೇಜಿಯವರು ಬೌದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ, 11 ಮಂದಿಗೆ ಧಮ್ಮೋಪದೇಶ ನೀಡಿದ್ದಾರೆ.

ದಲಿತ ಸಂಘರ್ಷ ಸಮಿತಿ ಮುಖಂಡ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಸ್ಥಳೀಯ ನಿವಾಸಿಗಳಾದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತಾ, ಸತೀಶ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಹಿಂದು ಧರ್ಮದಿಂದ ಬೌದ್ಧ ಮತಕ್ಕೆ ಮತಾಂತರಗೊಂಡಿದ್ದಾರೆ.

ಹಿಂದೂ ಧರ್ಮದಿಂದ ದಲಿತರು ಬೌದ್ಧರಾಗಿ ಪರಿವರ್ತನೆ ಹೊಂದಿರುವುದರ ಕುರಿತು ಚರ್ಚೆ ಆರಂಭವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮತಾಂತರ ಕುರಿತು ಪರ ವಿರೋಧದ ಬಿಸಿಬಿಸಿ ಚರ್ಚೆ ಆರಂಭವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications