ಮಂಗಳೂರು: ಅಪಾಯ ಆಹ್ವಾನಿಸುತ್ತಿರುವ ಹೊಸಮಠ ಸೇತುವೆ!
ಮಂಗಳೂರು, ಜುಲೈ 10: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಳುಗಡೆಯಾಗಿದ್ದ ಕಡಬ ಸಮೀಪದ ಹೊಸ್ಮಠ ಸೇತುವೆ ಮೇಲೆ ನೀರಿನ ಮಟ್ಟ ಕಡಿಮೆಯಾಗಿದೆ. ಹೊತ್ತು ಕಳೆಯುತ್ತಿದ್ದಂತೆ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಇಳಿಮುಖವಾಗುತ್ತಿದ್ದಂತೆ ಸೇತುವೆ ಮೇಲೆ ಸ್ಥಗಿತಗೊಳಿಸಲಾಗಿದ್ದ ವಾಹನ ಸಂಚಾರ ಆರಂಭವಾಗಿದೆ.
ಆದರೆ ಹೊಸಮಠ ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ವಾಹನಗಳನ್ನು ಚಲಾಯಿಸಲಾಗುತ್ತಿದೆ. ಯಾವುದೇ ತಡೆಗೋಡೆಯಿಲ್ಲದ ಈ ಸೇತುವೆ ಮೇಲೆ ವಾಹನಗಳು ಸಂಚರಿಸುತ್ತಿದ್ದು, ಅಪಾಯವನ್ನು ಆಹ್ವಾನಿಸುವಂತಾಗಿದೆ.
ಉಪ್ಪಿನಂಗಡಿ- ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆ ಮಳೆಗಾಲದ ಸಮಯದಲ್ಲಿ ಹಲವಾರು ಬಾರಿ ಮುಳುಗಡೆಯಾಗುತ್ತದೆ. ಈ ಸಂದರ್ಭದಲ್ಲಿ ವಾಹನಗಳು ಈ ಸೇತುವೆ ಮೂಲಕ ಸಂಚರಿಸದಂತೆ ತಡೆಯೊಡ್ಡಲಾಗುತ್ತದೆ.

ಆದರೆ ಇಂದು ಸೇತುವೆ ಬಳಿ ಯಾವುದೇ ಪೊಲೀಸ್ ಕಾವಲು ಇಲ್ಲದ ಕಾರಣ ನೀರು ತುಂಬಿದ ಸೇತುವೆಯ ಮೇಲೆ ವಾಹನಗಳು ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಿವೆ. 6 ವರ್ಷಗಳ ಹಿಂದೆ ಈ ಸೇತುವೆ ಮೇಲೆ ನೀರು ಹರಿಯುತ್ತಿದ್ದ ಸಂದರ್ಭ ಲಾರಿಯೊಂದು ಸಾಗಿದ ಪರಿಣಾಮ ಲಾರಿ ನೀರು ಪಾಲಾಗಿತ್ತು. ಅದರಲ್ಲಿದ್ದ ಇಬ್ಬರೂ ಸಿಬ್ಬಂದಿಗಳು ಸಾವಿಗೀಡಾಗಿದ್ದರು.
ಸೇತುವೆ ಮೇಲೆ ನದಿ ನೀರು ಹರಿಯುತ್ತಿದ್ದಾಗ ರಸ್ತೆ ಗೋಚರಿಸದಿರುವುದು ಈ ಘಟನೆಗೆ ಕಾರಣವಾಗಿದೆ. ಯಾವುದೇ ಅಡೆತಡೆ ಇರದ ಇಷ್ಟೊಂದು ಅಪಾಯಕಾರಿ ಸೇತುವೆ ಮೇಲೆ ನಡೆಯುವ ವಾಹನ ಸಂಚಾರದ ಮೇಲೆ ನಿಗಾ ಇಡದೇ ಇರುವ ಕಡಬ ಪೋಲೀಸರ ನಿರ್ಲಕ್ಷಕ್ಕೆ ಇದೀಗ ವ್ಯಾಪಕ ಖಂಡನೆಯೂ ವ್ಯಕ್ತವಾಗುತ್ತಿದೆ.

ಈ ಸೇತುವೆಯ ಮೇಲೆ ದುರಂತ ಸಂಭವಿಸುವ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ರವಿಕಾಂತೇ ಗೌಡ ಗಮನ ಹರಿಸಬೇಕೆಂದು ಕೋರಲಾಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications