ಮಂಗಳೂರು: ಅಪಾಯ ಆಹ್ವಾನಿಸುತ್ತಿರುವ ಹೊಸಮಠ ಸೇತುವೆ!
ಮಂಗಳೂರು, ಜುಲೈ 10: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಳುಗಡೆಯಾಗಿದ್ದ ಕಡಬ ಸಮೀಪದ ಹೊಸ್ಮಠ ಸೇತುವೆ ಮೇಲೆ ನೀರಿನ ಮಟ್ಟ ಕಡಿಮೆಯಾಗಿದೆ. ಹೊತ್ತು ಕಳೆಯುತ್ತಿದ್ದಂತೆ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಇಳಿಮುಖವಾಗುತ್ತಿದ್ದಂತೆ ಸೇತುವೆ ಮೇಲೆ ಸ್ಥಗಿತಗೊಳಿಸಲಾಗಿದ್ದ ವಾಹನ ಸಂಚಾರ ಆರಂಭವಾಗಿದೆ.
ಆದರೆ ಹೊಸಮಠ ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ವಾಹನಗಳನ್ನು ಚಲಾಯಿಸಲಾಗುತ್ತಿದೆ. ಯಾವುದೇ ತಡೆಗೋಡೆಯಿಲ್ಲದ ಈ ಸೇತುವೆ ಮೇಲೆ ವಾಹನಗಳು ಸಂಚರಿಸುತ್ತಿದ್ದು, ಅಪಾಯವನ್ನು ಆಹ್ವಾನಿಸುವಂತಾಗಿದೆ.
ಉಪ್ಪಿನಂಗಡಿ- ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆ ಮಳೆಗಾಲದ ಸಮಯದಲ್ಲಿ ಹಲವಾರು ಬಾರಿ ಮುಳುಗಡೆಯಾಗುತ್ತದೆ. ಈ ಸಂದರ್ಭದಲ್ಲಿ ವಾಹನಗಳು ಈ ಸೇತುವೆ ಮೂಲಕ ಸಂಚರಿಸದಂತೆ ತಡೆಯೊಡ್ಡಲಾಗುತ್ತದೆ.

ಆದರೆ ಇಂದು ಸೇತುವೆ ಬಳಿ ಯಾವುದೇ ಪೊಲೀಸ್ ಕಾವಲು ಇಲ್ಲದ ಕಾರಣ ನೀರು ತುಂಬಿದ ಸೇತುವೆಯ ಮೇಲೆ ವಾಹನಗಳು ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಿವೆ. 6 ವರ್ಷಗಳ ಹಿಂದೆ ಈ ಸೇತುವೆ ಮೇಲೆ ನೀರು ಹರಿಯುತ್ತಿದ್ದ ಸಂದರ್ಭ ಲಾರಿಯೊಂದು ಸಾಗಿದ ಪರಿಣಾಮ ಲಾರಿ ನೀರು ಪಾಲಾಗಿತ್ತು. ಅದರಲ್ಲಿದ್ದ ಇಬ್ಬರೂ ಸಿಬ್ಬಂದಿಗಳು ಸಾವಿಗೀಡಾಗಿದ್ದರು.
ಸೇತುವೆ ಮೇಲೆ ನದಿ ನೀರು ಹರಿಯುತ್ತಿದ್ದಾಗ ರಸ್ತೆ ಗೋಚರಿಸದಿರುವುದು ಈ ಘಟನೆಗೆ ಕಾರಣವಾಗಿದೆ. ಯಾವುದೇ ಅಡೆತಡೆ ಇರದ ಇಷ್ಟೊಂದು ಅಪಾಯಕಾರಿ ಸೇತುವೆ ಮೇಲೆ ನಡೆಯುವ ವಾಹನ ಸಂಚಾರದ ಮೇಲೆ ನಿಗಾ ಇಡದೇ ಇರುವ ಕಡಬ ಪೋಲೀಸರ ನಿರ್ಲಕ್ಷಕ್ಕೆ ಇದೀಗ ವ್ಯಾಪಕ ಖಂಡನೆಯೂ ವ್ಯಕ್ತವಾಗುತ್ತಿದೆ.

ಈ ಸೇತುವೆಯ ಮೇಲೆ ದುರಂತ ಸಂಭವಿಸುವ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ರವಿಕಾಂತೇ ಗೌಡ ಗಮನ ಹರಿಸಬೇಕೆಂದು ಕೋರಲಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications