ಎಂಬಿಎನಲ್ಲಿ ಚಿನ್ನದ ಪದಕ ಗೆದ್ದ ಮಂಗಳೂರಿನ ಡ್ಯಾಫ್ನಿ ಡಿಸೋಜಾ
ಮೂಲತಃ ಮಂಗಳೂರು ಮೂಲದವರಾದ ಜಾಫ್ನಿ ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಿದ್ದಾರೆ. ಇವರು ಎಂಬಿಎ ಪರೀಕ್ಷೆಯಲ್ಲಿ ಉನ್ನತ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದು, ಚಿನ್ನದ ಪದಕ ಸಂಪಾದಿಸಿದ್ದಾರೆ.
ಮಂಗಳೂರು, ಏಪ್ರಿಲ್ 15: ಮಂಗಳೂರು ಮೂಲದ ಡ್ಯಾಫ್ನಿ ಡಿಸೋಜಾ ಎಂಬಿಎನಲ್ಲಿ ಚಿನ್ನದ ಪದಕದೊಂದಿದೆ ತೇರ್ಗಡೆಯಾಗಿದ್ದಾರೆ.
ಮೂಲತಃ ಮಂಗಳೂರು ಮೂಲದವರಾದ ಡ್ಯಾಫ್ನಿ ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಫ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು 2017ರ ಏಪ್ರಿಲ್ 8 ರಂದು ಎಂಬಿಎ ಪರೀಕ್ಷೆಯಲ್ಲಿ ಉನ್ನತ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದು, ಚಿನ್ನದ ಪದಕ ಸಂಪಾದಿಸಿದ್ದಾರೆ. [ಶಾರ್ಟ್ ಸರ್ಕ್ಯೂಟ್, ಮಂಗಳೂರು ಕಾರ್ಪೊರೇಶನ್ ಬ್ಯಾಂಕಿಗೆ ಬೆಂಕಿ]

ಮಂಗಳೂರಿನಲ್ಲಿ ಜನಿಸಿದ ಡ್ಯಾಫ್ನಿ, ಬೆಂಗಳೂರಿನ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ ಮುಗಿಸಿದ್ದಾರೆ. ನಂತರ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ನಲ್ಲಿ ಪಿಯುಸಿ ಹಾಗೆಯೇ ಬಿ. ಕಾಂ ಅನ್ನು ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್ ನಲ್ಲಿ ಮುಗಿಸಿದ್ದಾರೆ.
ಡ್ಯಾಫ್ನಿ ಡಿಸೋಜಾ ತಂದೆ ಕ್ಲಾರೆನ್ಸ್ ಮತ್ತು ತಾಯಿ ಶೀಲಾ (ಡಿಸಿಲ್ವಾ) ಮೂಲತಃ ಮಂಗಳೂರಿನವರು. ಮಗಳ ಸಾಧನೆ ಬಗ್ಗೆ ಮಾತನಾಡಿರುವ ಜಾಫ್ನಿ ಪೋಷಕರು, "ಡ್ಯಾಫ್ನಿ ಚಿಕ್ಕಂದಿನಿಂದಲೇ ಅಧ್ಯಯನದಲ್ಲಿ ಎತ್ತಿದ ಕೈ . ಅವಳು ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಸ್ಕೂಲ್ ನಿಂದ ಈಗಿನ ಎಂಬಿಎ ತನಕ ಎಂದೂ ಕಲಿಕೆಯಲ್ಲಿ ಹಿಂದಿರಲಿಲ್ಲ. ಮಗಳ ಸಾಧನೆ ಕಂಡು ಬಹಳ ಹೆಮ್ಮೆಯಾಗುತ್ತದೆ," ಎಂದು ಆಕೆಯ ತಾಯಿ ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ ಡ್ಯಾಫ್ನಿ ಬೆಂಗಳೂರಿನ ಮರಾಠ ಹಳ್ಳಿಯ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಈ ಶೈಕ್ಷಣಿಕ ಸಾಧನೆಗಾಗಿ ಮಂಗಳೂರು ಜನತೆ ಡ್ಯಾಫ್ನಿ ಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ. [ಇದು 56 ವಿದೇಶಿಯರ ಮಲಬಾರ್ ಆಟೋ ರಿಕ್ಷಾ ಚಾಲೆಂಜ್]
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications