ಕುದ್ರೋಳಿ ದೇವಾಲಯದಲ್ಲಿ ದಸರಾ ಸಂಭ್ರಮ
ಮಂಗಳೂರು, ಸೆ. 25 : ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ ಆರಂಭಗೊಂಡಿದೆ. ನವದುರ್ಗೆಯರ ಮೂರ್ತಿಗಳನ್ನು ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾಕ್ಕೆ ಚಾಲನೆ ನೀಡಲಿದ್ದಾರೆ.
ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.25ರಿಂದ ಅ.5ರ ತನಕ 2014ರ ದಸರಾ ಮಹೋತ್ಸವ ನಡೆಯಲಿದೆ. ಗುರುವಾರ ಬೆಳಗ್ಗೆ ವಿವಿಧ ವೇಷ ಭೂಷಣಗಳ ಭವ್ಯ ಮೆರವಣಿಗೆಯಲ್ಲಿ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ತಂದು ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. [ಮಂಗಳೂರು ದಸರಾ, ಸಿಎಂಗೆ ಆಹ್ವಾನ]
ಸೆ.27ರ ಶನಿವಾರ ಸಂಜೆ 6.30ಕ್ಕೆ ಸಿಎಂ ಸಿದ್ದರಾಮಯ್ಯ ದಸರಾವನ್ನು ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವ ಜನಾರ್ದನ ಪೂಜಾರಿ ವಹಿಸಲಿದ್ದಾರೆ. ಸೆ.25ರಿಂದ ಅ.3ರವರೆಗೆ ಪ್ರತಿದಿನ ಕುದ್ರೋಳಿ ಸಂತೋಷಿ ಕಲಾ ಮಂಟಪದಲ್ಲಿ ನಾಡಿನ ಹೆಸರಾಂತ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕುದ್ರೋಳಿ ದೇವಾಲಯದ ಚಿತ್ರಗಳು [ಚಿತ್ರಗಳು : ಐಸಾಕ್ ರಿರ್ಚಡ್ ಮಂಗಳೂರು]

ಮಂಗಳೂರು ದಸರಾ ಆರಂಭ
ಪುರಾಣ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ 2014ರ ದಸರಾ ಆರಂಭಗೊಂಡಿದೆ. ಸೆ.25ರಿಂದ ಅ.5ರವೆರೆಗೆ ಮಂಗಳೂರು ದಸರಾ ನಡೆಯಲಿದೆ.

ಮುಖ್ಯಮಂತ್ರಿಗಳಿಂದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ 6.30ಕ್ಕೆ ದಸರಾವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವ ಜನಾರ್ದನ ಪೂಜಾರಿ ವಹಿಸಲಿದ್ದಾರೆ.

ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ
ಗುರುವಾರ ನವದುರ್ಗೆಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಕುದ್ರೋಳಿ ದೇವಾಲಯದಲ್ಲಿ ನಡೆಯಿತು. ವಿವಿಧ ವೇಷಧಾರಿಗಳು ನವದುರ್ಗೆಯರ ಮೂರ್ತಿಗಳ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಅ.4ರಂದು ಭವ್ಯ ಮೆರವಣಿಗೆ
ಅ.4ರಂದು ಸಂಜೆ 4ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನೊಳಗೊಂಡ '2014 ಮಂಗಳೂರು ದಸರಾ'ದ ಬೃಹತ್ ಮೆರವಣಿಗೆ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು
ಸೆ.25ರ ಗುರುವಾರದಿಂದ ಅ.3ರವರೆಗೆ ಪ್ರತಿದಿನ ಕುದ್ರೋಳಿ ಸಂತೋಷಿ ಕಲಾ ಮಂಟಪದಲ್ಲಿ ನಾಡಿನ ಹೆಸರಾಂತ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications