ಕರಾವಳಿಯಲ್ಲೂ ಖರ್ಜೂರ ಬೆಳೆದ ಸಾದಿಕ್
ಮಂಗಳೂರು ಜುಲೈ 5: ಅರಬ್ ದೇಶದ ಮರುಭೂಮಿ ಪ್ರದೇಶಗಳಲ್ಲಿ ಬೆಳೆಯುತ್ತಿದ್ದ ಖರ್ಜೂರದ ಮರಗಳ ಬಗ್ಗೆ ಕೇಳಿದ್ದೇವೆ. ಉಷ್ಣವಲಯ ಆದ ಕಾರಣ ಅಲ್ಲಿ ಸ್ವಾಭಾವಿಕವಾಗಿ ಖರ್ಜೂರದ ಮರಗಳು ಬೆಳೆಯುತ್ತವೆ. ಆದರೆ ನಮ್ಮ ಕರಾವಳಿಯಲ್ಲೂ ಖರ್ಜೂರ ಬೆಳೆಯುತ್ತದೆ ಎಂದರೆ? ಹೌದು. ಇದನ್ನು ನಂಬಲೇಬೇಕು. ಮಂಗಳೂರು ಹೊರವಲಯದ ಕಾಪು ಎಂಬಲ್ಲಿ ಖರ್ಜೂರದ ಮರ ಬೆಳೆಸಲಾಗಿದ್ದು, ಆ ಮರ ಈಗ ಫಲ ಕೊಡಲಾರಂಭಿಸಿದೆ.
ಮರುಭೂಮಿಯಲ್ಲಷ್ಟೇ ಹೆಚ್ಚಾಗಿ ಬೆಳೆಯುವ ಖರ್ಜೂರಗಳನ್ನು ಪ್ರಗತಿಪರ ಕೃಷಿಕ ಮಲ್ಲಾರು ಉದ್ಯಮಿ ಮಹಮ್ಮದ್ ಸಾದಿಕ್ ದೀನಾರ್ ಇಲ್ಲೂ ಬೆಳೆದು ತೋರಿಸಿದ್ದಾರೆ.
ಮಲ್ಲಾರು ಗ್ರಾಮದ ಕೊಂಬ ಗುಡ್ಡೆಯ ಸಾದಿಕ್ ತಮ್ಮ ಮನೆ ಮುಂದೆ ಮೂರು ಖರ್ಜೂರದ ಗಿಡಗಳನ್ನು ಬೆಳೆಸಿದ್ದಾರೆ. ಎರಡು ಗಿಡಗಳು ಈಗಾಗಲೇ ಫಲ ನೀಡುತ್ತಿವೆ. ಇದೇ ಗ್ರಾಮದ ಇನ್ನೆರಡು ಕುಟುಂಬಗಳೂ ಖರ್ಜೂರ ಬೆಳೆಗೆ ಆಸಕ್ತಿ ತೋರಿವೆ. ಕಾಪುವಿನ ಉದ್ಯಮಿಗಳಾದ ನಜೀರ್ ಅಹಮದ್ 3 ಗಿಡಗಳನ್ನು ನೆಟ್ಟಿದ್ದರೆ, ಮತ್ತೋರ್ವ ಉದ್ಯಮಿ ಮಹಮ್ಮದ್ ಅಸ್ಲಂ ಖಾಝಿ ಅವರು 8 ಗಿಡಗಳನ್ನು ನೆಟ್ಟಿದ್ದಾರೆ.

10 ವರ್ಷದ ಗಿಡವನ್ನು 10 ಸಾವಿರ ರೂಪಾಯಿ ಕೊಟ್ಟು ತರಿಸಿದ್ದರು. ಈ ಗಿಡಗಳು ನೆಟ್ಟ ವರ್ಷದೊಳಗೆ ಫಲ ನೀಡಿರುವುದು ವಿಶೇಷ. ಸುಮಾರು 15ರಿಂದ 20 ಕೆಜಿ ಇಳುವರಿಯು ಪ್ರಥಮ ವರ್ಷದಲ್ಲೇ ದೊರೆತಿದೆ. ಆದ ಕಾರಣ ಸಾದಿಕ್ ತಮ್ಮ ಸುತ್ತಮುತ್ತಲಿನ ಮನೆಗಳಿಗೆ ಅವುಗಳನ್ನು ಹಂಚುತ್ತಿದ್ದಾರೆ.
ಖರ್ಜೂರದ ಮರ ಏಷ್ಯಾ ಮತ್ತು ಆಫ್ರಿಕಾದ ಉಷ್ಣ ವಲಯಗಳಲ್ಲೆಲ್ಲ ಸ್ವಾಭಾವಿಕವಾಗಿ ಬೆಳೆಯುವುದಲ್ಲದೆ ಬೇಸಾಯದಲ್ಲೂ ಇದೆ. ಮೂಲತಃ ಎಲ್ಲಿಯದೆಂದು ಖಚಿತವಾಗಿ ತಿಳಿಯದಿದ್ದರೂ ಪರ್ಷಿಯದ ಖಾರಿ ಇಲ್ಲವೆ ಪಶ್ಚಿಮ ಪಾಕಿಸ್ತಾನ ಇದರ ಉಗಮಸ್ಥಾನವೆಂದು ನಂಬಲಾಗಿದೆ. ಅರಬ್ ದೇಶಗಳ ಮರುಭೂಮಿ ಪ್ರದೇಶಗಳಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತಿದ್ದ ಖರ್ಜೂರದ ಮರವನ್ನು ಸಹಸ್ರಾರು ವರ್ಷಗಳ ಹಿಂದೆಯೇ ಆ ದೇಶಗಳಲ್ಲಿ ವ್ಯಾಪಕವಾಗಿ ರೂಢಿಸಲಾಯಿತು. ಅಲ್ಲಿಂದ ಕಾಲಕ್ರಮೇಣ ಸ್ಪೇನಿಗೂ ನೈಲ್ ನದಿ ಕಣಿವೆಯ ಒಣ ಪ್ರದೇಶಗಳಿಗೂ ಕಾಲಿಟ್ಟಿತು. ಎರಡು-ಮೂರು ಶತಮಾನಗಳ ಹಿಂದೆ ಸ್ಪೇನಿನಿಂದ ಅಮೆರಿಕಕ್ಕೆ ಇದನ್ನು ತರಲಾಯಿತು. ಈಗ ಅಮೆರಿಕದ ಉಷ್ಣವಲಯದ ಒಣ ಪ್ರದೇಶಗಳಲ್ಲಿ ಇದರ ಬೇಸಾಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications