ಕರಾವಳಿಯಲ್ಲೂ ಖರ್ಜೂರ ಬೆಳೆದ ಸಾದಿಕ್
ಮಂಗಳೂರು ಜುಲೈ 5: ಅರಬ್ ದೇಶದ ಮರುಭೂಮಿ ಪ್ರದೇಶಗಳಲ್ಲಿ ಬೆಳೆಯುತ್ತಿದ್ದ ಖರ್ಜೂರದ ಮರಗಳ ಬಗ್ಗೆ ಕೇಳಿದ್ದೇವೆ. ಉಷ್ಣವಲಯ ಆದ ಕಾರಣ ಅಲ್ಲಿ ಸ್ವಾಭಾವಿಕವಾಗಿ ಖರ್ಜೂರದ ಮರಗಳು ಬೆಳೆಯುತ್ತವೆ. ಆದರೆ ನಮ್ಮ ಕರಾವಳಿಯಲ್ಲೂ ಖರ್ಜೂರ ಬೆಳೆಯುತ್ತದೆ ಎಂದರೆ? ಹೌದು. ಇದನ್ನು ನಂಬಲೇಬೇಕು. ಮಂಗಳೂರು ಹೊರವಲಯದ ಕಾಪು ಎಂಬಲ್ಲಿ ಖರ್ಜೂರದ ಮರ ಬೆಳೆಸಲಾಗಿದ್ದು, ಆ ಮರ ಈಗ ಫಲ ಕೊಡಲಾರಂಭಿಸಿದೆ.
ಮರುಭೂಮಿಯಲ್ಲಷ್ಟೇ ಹೆಚ್ಚಾಗಿ ಬೆಳೆಯುವ ಖರ್ಜೂರಗಳನ್ನು ಪ್ರಗತಿಪರ ಕೃಷಿಕ ಮಲ್ಲಾರು ಉದ್ಯಮಿ ಮಹಮ್ಮದ್ ಸಾದಿಕ್ ದೀನಾರ್ ಇಲ್ಲೂ ಬೆಳೆದು ತೋರಿಸಿದ್ದಾರೆ.
ಮಲ್ಲಾರು ಗ್ರಾಮದ ಕೊಂಬ ಗುಡ್ಡೆಯ ಸಾದಿಕ್ ತಮ್ಮ ಮನೆ ಮುಂದೆ ಮೂರು ಖರ್ಜೂರದ ಗಿಡಗಳನ್ನು ಬೆಳೆಸಿದ್ದಾರೆ. ಎರಡು ಗಿಡಗಳು ಈಗಾಗಲೇ ಫಲ ನೀಡುತ್ತಿವೆ. ಇದೇ ಗ್ರಾಮದ ಇನ್ನೆರಡು ಕುಟುಂಬಗಳೂ ಖರ್ಜೂರ ಬೆಳೆಗೆ ಆಸಕ್ತಿ ತೋರಿವೆ. ಕಾಪುವಿನ ಉದ್ಯಮಿಗಳಾದ ನಜೀರ್ ಅಹಮದ್ 3 ಗಿಡಗಳನ್ನು ನೆಟ್ಟಿದ್ದರೆ, ಮತ್ತೋರ್ವ ಉದ್ಯಮಿ ಮಹಮ್ಮದ್ ಅಸ್ಲಂ ಖಾಝಿ ಅವರು 8 ಗಿಡಗಳನ್ನು ನೆಟ್ಟಿದ್ದಾರೆ.

10 ವರ್ಷದ ಗಿಡವನ್ನು 10 ಸಾವಿರ ರೂಪಾಯಿ ಕೊಟ್ಟು ತರಿಸಿದ್ದರು. ಈ ಗಿಡಗಳು ನೆಟ್ಟ ವರ್ಷದೊಳಗೆ ಫಲ ನೀಡಿರುವುದು ವಿಶೇಷ. ಸುಮಾರು 15ರಿಂದ 20 ಕೆಜಿ ಇಳುವರಿಯು ಪ್ರಥಮ ವರ್ಷದಲ್ಲೇ ದೊರೆತಿದೆ. ಆದ ಕಾರಣ ಸಾದಿಕ್ ತಮ್ಮ ಸುತ್ತಮುತ್ತಲಿನ ಮನೆಗಳಿಗೆ ಅವುಗಳನ್ನು ಹಂಚುತ್ತಿದ್ದಾರೆ.
ಖರ್ಜೂರದ ಮರ ಏಷ್ಯಾ ಮತ್ತು ಆಫ್ರಿಕಾದ ಉಷ್ಣ ವಲಯಗಳಲ್ಲೆಲ್ಲ ಸ್ವಾಭಾವಿಕವಾಗಿ ಬೆಳೆಯುವುದಲ್ಲದೆ ಬೇಸಾಯದಲ್ಲೂ ಇದೆ. ಮೂಲತಃ ಎಲ್ಲಿಯದೆಂದು ಖಚಿತವಾಗಿ ತಿಳಿಯದಿದ್ದರೂ ಪರ್ಷಿಯದ ಖಾರಿ ಇಲ್ಲವೆ ಪಶ್ಚಿಮ ಪಾಕಿಸ್ತಾನ ಇದರ ಉಗಮಸ್ಥಾನವೆಂದು ನಂಬಲಾಗಿದೆ. ಅರಬ್ ದೇಶಗಳ ಮರುಭೂಮಿ ಪ್ರದೇಶಗಳಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತಿದ್ದ ಖರ್ಜೂರದ ಮರವನ್ನು ಸಹಸ್ರಾರು ವರ್ಷಗಳ ಹಿಂದೆಯೇ ಆ ದೇಶಗಳಲ್ಲಿ ವ್ಯಾಪಕವಾಗಿ ರೂಢಿಸಲಾಯಿತು. ಅಲ್ಲಿಂದ ಕಾಲಕ್ರಮೇಣ ಸ್ಪೇನಿಗೂ ನೈಲ್ ನದಿ ಕಣಿವೆಯ ಒಣ ಪ್ರದೇಶಗಳಿಗೂ ಕಾಲಿಟ್ಟಿತು. ಎರಡು-ಮೂರು ಶತಮಾನಗಳ ಹಿಂದೆ ಸ್ಪೇನಿನಿಂದ ಅಮೆರಿಕಕ್ಕೆ ಇದನ್ನು ತರಲಾಯಿತು. ಈಗ ಅಮೆರಿಕದ ಉಷ್ಣವಲಯದ ಒಣ ಪ್ರದೇಶಗಳಲ್ಲಿ ಇದರ ಬೇಸಾಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications