ದತ್ತಮಾಲಾ ಅಭಿಯಾನ:ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ
ಮಂಗಳೂರು, ಡಿಸೆಂಬರ್ 12: ದತ್ತ ಜಯಂತಿ ಅಂಗವಾಗಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಮಾಲಾ ಅಭಿಯಾನ ಇಂದಿನಿಂದ ಆರಂಭಗೊಂಡು 22 ರವರೆಗೆ ನಡೆಯಲಿದೆ. ಡಿಸೆಂಬರ್ 22 ರಂದು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಕೈಗೊಳ್ಳಲಿದ್ದಾರೆ.
ಈ ಅಭಿಯಾನದಲ್ಲಿ ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಜರಂಗದಳದ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಸುನಿಲ್ ಕೆಆರ್ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 20 ರಂದು ದತ್ತಪೀಠದಲ್ಲಿ ಅನುಸೂಯದೇವಿ ಪೂಜೆ , ಗಣಪತಿ ಹೋಮ ಹಾಗೂ ದುರ್ಗಾಹೋಮ ಮುಂಜಾನೆ ನಡೆಯಲಿದ್ದು, ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ಮತ್ತು ದತ್ತಪೀಠ ದರ್ಶನ ನಡೆಯಲಿದೆ.

ಈ ಬಾರಿಯ ದತ್ತಮಾಲಾ ಅಭಿಯಾನದಲ್ಲಿ ಮಂಗಳೂರು ಉಡುಪಿ ಪುತ್ತೂರು ಕೊಡಗು ಮತ್ತು ಕೇರಳದ ಕಾಸರಗೋಡು ಜಿಲ್ಲೆಯಿಂದ ಒಟ್ಟು 15000 ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಮುರಳಿ ಹಸಂತಡ್ಕ ತಿಳಿಸಿದ್ದಾರೆ.
ದತ್ತಮಾಲಾ ಅಭಿಯಾನದ ಅಂಗವಾಗಿ ಮಂಗಳೂರಿನಲ್ಲಿಯೂ ನೂರಾರು ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದರು.

ಸ್ಕಂದ ಪಂಚಮಿ ದಿನವಾದ ಇಂದು ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ದತ್ತಪೀಠ ಅಭಿಯಾನಕ್ಕೆ ವಿದ್ಯುಕ್ತವಾಗಿ ದತ್ತ ಹೋಮದ ಮುಖಾಂತರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾಂತ ಸಂಚಾಲಕ ಸುನಿಲ್ ಕೆ. ರ್ ವಿಭಾಗ ಸಂಚಾಲಕ ಭುಜಂಗ ಕುಲಾಲ್ , ಜಿಲ್ಲಾ ಸಂಚಾಲಕ ಪ್ರವೀಣ್ ಕುತ್ತಾರ್ , ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ , ಜಿಲ್ಲಾ ಅಧ್ಯಕ್ಷ ಜಗದೀಶ್ ಶೇಣವ , ಕಾರ್ಯದರ್ಶಿ ಶಿವಾನಂದ ಮೆಂಡನ್,ಜಿಲ್ಲಾ ಸಹಸಂಚಾಲಕ ಪುನೀತ್ ಅತ್ತಾವರ, ನವೀನ್ ಮೂಡ್ ಶೆಡ್ಡೆ , ಗುರುಪ್ರಸಾದ್ ಉಳ್ಳಾಲ್, ಪ್ರದೀಪ್ ಸರಿಪಲ್ಲ ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications