ದತ್ತಮಾಲಾ ಅಭಿಯಾನ:ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ
ಮಂಗಳೂರು, ಡಿಸೆಂಬರ್ 12: ದತ್ತ ಜಯಂತಿ ಅಂಗವಾಗಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಮಾಲಾ ಅಭಿಯಾನ ಇಂದಿನಿಂದ ಆರಂಭಗೊಂಡು 22 ರವರೆಗೆ ನಡೆಯಲಿದೆ. ಡಿಸೆಂಬರ್ 22 ರಂದು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಕೈಗೊಳ್ಳಲಿದ್ದಾರೆ.
ಈ ಅಭಿಯಾನದಲ್ಲಿ ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಜರಂಗದಳದ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಸುನಿಲ್ ಕೆಆರ್ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 20 ರಂದು ದತ್ತಪೀಠದಲ್ಲಿ ಅನುಸೂಯದೇವಿ ಪೂಜೆ , ಗಣಪತಿ ಹೋಮ ಹಾಗೂ ದುರ್ಗಾಹೋಮ ಮುಂಜಾನೆ ನಡೆಯಲಿದ್ದು, ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ಮತ್ತು ದತ್ತಪೀಠ ದರ್ಶನ ನಡೆಯಲಿದೆ.

ಈ ಬಾರಿಯ ದತ್ತಮಾಲಾ ಅಭಿಯಾನದಲ್ಲಿ ಮಂಗಳೂರು ಉಡುಪಿ ಪುತ್ತೂರು ಕೊಡಗು ಮತ್ತು ಕೇರಳದ ಕಾಸರಗೋಡು ಜಿಲ್ಲೆಯಿಂದ ಒಟ್ಟು 15000 ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಮುರಳಿ ಹಸಂತಡ್ಕ ತಿಳಿಸಿದ್ದಾರೆ.
ದತ್ತಮಾಲಾ ಅಭಿಯಾನದ ಅಂಗವಾಗಿ ಮಂಗಳೂರಿನಲ್ಲಿಯೂ ನೂರಾರು ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದರು.

ಸ್ಕಂದ ಪಂಚಮಿ ದಿನವಾದ ಇಂದು ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ದತ್ತಪೀಠ ಅಭಿಯಾನಕ್ಕೆ ವಿದ್ಯುಕ್ತವಾಗಿ ದತ್ತ ಹೋಮದ ಮುಖಾಂತರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾಂತ ಸಂಚಾಲಕ ಸುನಿಲ್ ಕೆ. ರ್ ವಿಭಾಗ ಸಂಚಾಲಕ ಭುಜಂಗ ಕುಲಾಲ್ , ಜಿಲ್ಲಾ ಸಂಚಾಲಕ ಪ್ರವೀಣ್ ಕುತ್ತಾರ್ , ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ , ಜಿಲ್ಲಾ ಅಧ್ಯಕ್ಷ ಜಗದೀಶ್ ಶೇಣವ , ಕಾರ್ಯದರ್ಶಿ ಶಿವಾನಂದ ಮೆಂಡನ್,ಜಿಲ್ಲಾ ಸಹಸಂಚಾಲಕ ಪುನೀತ್ ಅತ್ತಾವರ, ನವೀನ್ ಮೂಡ್ ಶೆಡ್ಡೆ , ಗುರುಪ್ರಸಾದ್ ಉಳ್ಳಾಲ್, ಪ್ರದೀಪ್ ಸರಿಪಲ್ಲ ಉಪಸ್ಥಿತರಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications