ಮಂಗಳೂರು ಸ್ಮಾರ್ಟ್ ಬಸ್ ಬೇ ನಿರ್ಮಾಣದ ಕಾಮಗಾರಿ ತಡೆಹಿಡಿಯಲು ಆದೇಶಿಸಿದ ಡಿಸಿ
ಮಂಗಳೂರು, ನವೆಂಬರ್. 26: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ದಾರಿ ತಪ್ಪುತ್ತಿದೆಯೇ? ಇದು ಹಣ ಮಾಡುವ ಯೋಜನೆ ಆಗುತ್ತಿದೆಯೇ? ಇಂತಹ ಅನುಮಾನ ಇದೀಗ ಕಾಡಲಾರಂಭಿಸಿದೆ. ಯಾಕೆಂದರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಮಾರ್ಟ್ ಬಸ್ ಸ್ಟ್ಯಾಂಡ್ ಗಳ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಡೆ ನೀಡಿದ್ದಾರೆ.
ಮಂಗಳೂರು ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಬಸ್ ಬೇ ಗಳು ಮಂಗಳೂರಿನ ಹವಮಾನಕ್ಕೆ ಅನುಗುಣವಾಗಿಲ್ಲ ಹಾಗೂ ಅವೈಜ್ಞಾನಿಕವಾಗಿವೆ ಎಂಬ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸ್ಮಾರ್ಟ್ ಬಸ್ ಬೇ ನಿರ್ಮಾಣದ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಮಂಗಳೂರು ನಗರದಲ್ಲಿ 27 ಸ್ಮಾರ್ಟ್ ಬಸ್ ಬೇ ಗಳನ್ನು ನಿರ್ಮಾಣ ಮಾಡಲು ಬೆಂಗಳೂರಿನ ಖಾಸಗಿ ಕಂಪೆನಿಗೆ ಟೆಂಡರ್ ನೀಡಲಾಗಿದೆ. ಆದರೆ ಈ ಸಂಸ್ಥೆ ನಿರ್ಮಿಸಲು ಮುಂದಾಗಿರುವ ಬಸ್ ಬೇ ಗಳು ಕರಾವಳಿಯಲ್ಲಿ ಅಧಿಕವಾಗಿರುವ ಬಿಸಿಲು ಮತ್ತು ಮಳೆಯಿಂದ ಜನರಿಗೆ ರಕ್ಷಣೆ ನೀಡಲಾರದು ಎಂದು ವಿಮರ್ಶಿಸಲಾಗಿದೆ.

ಅಲ್ಲದೇ ಅತಿ ದುಬಾರಿಯಾಗಿರುವ ಈ ಸ್ಮಾರ್ಟ್ ಬಸ್ ಬೇ ಗಳು ಕೇವಲ ಹಣ ಮಾಡುವ ಯೋಜನೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬಸ್ ಬೇ ನಿರ್ಮಾಣದ ಕಾಮಗಾರಿ ತಡೆಗೆ ಆದೇಶಿಸಿದ್ದಾರೆ.
ಮಾದರಿಯಾಗಿ ಮೂರು ಬಸ್ ಬೇಗಳನ್ನು ಮಾತ್ರ ನಿರ್ಮಾಣ ಮಾಡಿ ಅದರ ಸಾಧಕ - ಭಾಧಕಗಳನ್ನು ನೋಡಿ ಮುಂದುವರೆಯುವಂತೆ ಈ ಹಿಂದೆ ಸೂಚಿಸಲಾಗಿತ್ತು.

ಈಗಾಗಲೇ ನಗರದ ಕಾವೂರು, ಮಣ್ಣಗುಡ್ಡೆ, ಕದ್ರಿ ಹಿಲ್ಸ್ ಹೀಗೆ ಅನೇಕ ಕಡೆ ಅತೀ ದುಬಾರಿಯಾದ ಇಂತಹ ಸ್ಮಾರ್ಟ್ ಬಸ್ ಬೇ ಗಳನ್ನು ನಿರ್ಮಾಣ ಮಾಡಿ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications