ಕರಾವಳಿಯಲ್ಲಿ ಮಾದಕ ವಸ್ತು ಬ್ರೇಕ್ ಗೆ ಡಿಸಿ ಪಣ
ಮಂಗಳೂರು ನವೆಂಬರ್ 25: ನಗರದೆಲ್ಲೆಡೆ ಗಾಂಜಾ ಹಾಗು ಮಾದಕವಸ್ತುಗಳ ಜಾಲ ಹೆಚ್ಚಾಗುತ್ತಿದೆ. ಈ ಮಾದಕ ವಸ್ತುಗಳಿಗೆ ಯುವಕರು ಮತ್ತು ಶಾಲಾಕಾಲೇಜುಗಳ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಹೀಗಾಗಿ ಯುವಕರು ಮಾದಕ ವ್ಯಸನಿಗಳಾಗದಂತೆ ತಡೆಯಲು ತೀವ್ರ ನಿಗಾ ವಹಿಸುವಂತೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಸೂಚಿಸಿದರು.
ಮಂಗಳೂರು, ದಕ್ಷಿಣ ಕನ್ನಡ ಭಾಗಗಳಲ್ಲಿ ಗಾಂಜಾ ಅಪೀಮು, ಹೆರಾಯಿನ್ ಇತ್ಯಾದಿಗಳನ್ನು ವಿತರಿಸುವ ಜಾಲವೇ ಹಬ್ಬಿದ್ದು, ಈ ಚಟುವಟಿಕೆಯಲ್ಲಿ ಯುವ ಜನತೆ ಹಾಳಾಗುತ್ತಿರುವುದರ ಬಗ್ಗೆ ಗಮನಹರಿಸಿ ಕ್ರಮ ಜರುಗಿಸುವುದಾಗಿ ಅವರು ತಿಳಿಸಿದರು.[ಡ್ರಗ್ ಸೇವಿಸುವ ವಿದ್ಯಾರ್ಥಿಗಳನ್ನು ಜೈಲಿಗಟ್ಟಿ: ಪಿಯು ಇಲಾಖೆ ಸೂಚನೆ]

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಲ್ಲಿ ಮಾತನಾಡಿ, ಗಾಂಜಾ, ಅಫೀಮು ಸೇರಿದಂತೆ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದನ್ನು ನಿಯಂತ್ರಿಸಲು ಮತ್ತು ಮಾದಕ ವಸ್ತುಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲು ಈಗಾಗಲೇ ನಗರದಲ್ಲಿರುವ ಪ್ರತಿ ಶಾಲಾ ಕಾಲೇಜುಗಳಲ್ಲಿ ನೋಡೆಲ್ ಶಿಕ್ಷಕರನ್ನು ನೇಮಿಸಲಾಗಿದೆ. ಈ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಿ ಅವರು ವಿದ್ಯಾರ್ಥಿಗಳ ಮೇಲೆ ನಿಗಾ ಇಡುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಅಲ್ಲದೆ ನಗರದಾದ್ಯಂತ ಮಾದಕ ವಸ್ತುಗಳನ್ನು ಗುಪ್ತವಾಗಿ ಮಾರುವ ಕೊಳ್ಳುವ ಜಾಲ ಹೆಚ್ಚಿದೆ. ಈ ಚಟುವಟಿಕೆಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಗಾಂಜಾ ಪ್ರಕರಣ ಶಾಲಾ ಕಾಲೇಜುಗಳಲ್ಲಿ ಕಂಡು ಬಂದರೆ ನೋಡೆಲ್ ಶಿಕ್ಷಕರು ನೇರವಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ. ನಂತರ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಗಾಂಜಾ ಮುಕ್ತ ಜಿಲ್ಲೆಯಾಗಿಸಲು ಪಣತೊಟ್ಟಿರುವುದಾಗಿ ಡಿಸಿ ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಸೇರಿದಂತೆ ತಂಬಾಕು ಸೇವನೆ ನಿಯಂತ್ರಿಸಲು ನೋಡೆಲ್ ಶಿಕ್ಷಕರಿಗೆ ತಿಳಿಸಲಾಗುವುದು, ಶಾಲಾ ಕಾಲೇಜಿನ ಸುತ್ತಮುತ್ತ ತಂಬಾಕು ಉತ್ಪನ್ನಗಳ ಚಟುವಟಿಕೆಗಳ ಮೇಲೂ ನಿಗಾ ಇಡಲು ಸೂಚಿಸಲಾಗುವುದು ಎಂದು ತಿಳಿಸಿದರು. ಈಗಾಗಲೇ ತಂಬಾಕು ಉತ್ಪನ್ನ ಮಾರಾಟ ನಿಷೇಧ ನಿಯಮ ಜಾರಿಯಾಗಿರುವ ಬಗ್ಗೆ ಮಾಹಿತಿ ನೀಡಿದ ಅವರು ತಂಬಾಕು ಮತ್ತು ಮಾದಕ ವಸ್ತುಗಳ ಚಟುವಟಿಕೆಯನ್ನು ಮುಕ್ತಗೊಳಿಸಲು ಸಹಕರಿಸುವಂತೆ ಕೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications