ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುಂಜಾಲಕಟ್ಟೆಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

|
Google Oneindia Kannada News

ಮಂಗಳೂರು ಆಗಸ್ಟ್ 10 : ಜಾನುವಾರುಗಳನ್ನು ಕಳ್ಳತನ ಮಾಡಿ, ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿರುವವರನ್ನು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಪುಂಜಾಲಕಟ್ಟೆಯ ಸೊಣಂದೂರು ಅಡ್ತಿಳ ಎಂಬಲ್ಲಿ ನಡೆದಿದೆ.

ಮಂಗಳೂರು ಜಿಲ್ಲಾ ಡಿಸಿಐಬಿ ಪೊಲೀಸರ ತಂಡ ಈ ಸಾಹಸ ಮೆರೆದಿದೆ. ಈ ಸಂದರ್ಭದಲ್ಲಿ ವಾಹನವನ್ನು ಆರೋಪಿಗಳು ಸ್ಥಳದಲ್ಲಿಯೇ ಬಿಟ್ಟು ಸಾಗಾಟದ ಸಮಯದಲ್ಲಿ ಬೆಂಗಾವಲಿಗಿದ್ದ ವಾಹನದಲ್ಲಿ ಪರಾರಿಯಾಗಿದ್ದಾರೆ.

ಮಾತೃ ಹೃದಯಕ್ಕೆ ಕರಗದವರು ಉಂಟೆ? ಮಂಗಳೂರಲ್ಲಿ ಮನ ಮಿಡಿವ ಕಥೆಮಾತೃ ಹೃದಯಕ್ಕೆ ಕರಗದವರು ಉಂಟೆ? ಮಂಗಳೂರಲ್ಲಿ ಮನ ಮಿಡಿವ ಕಥೆ

ಅಕ್ರಮ ಜಾನುವಾರು ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದ ಡಿಸಿಐಬಿ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಮೀಪ ಗಸ್ತಿನಲ್ಲಿದ್ದರು. ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ಸಾಗಿಬಂದ 407 ವಾಹನ ನಿಲ್ಲಿಸಲು ಸೂಚಿಸಿದ್ದಾರೆ. ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾನೆ.

DCIB police team rescue 6 cattles being smuggled

ಆಗ ಡಿಸಿಐಬಿ ತಂಡ ಗೋಕಳ್ಳರನ್ನು ಬೆನ್ನತ್ತಿದೆ. ಸೊಣಂದೂರು ಅಡ್ತಿಳ ಎಂಬಲ್ಲಿ ಅಕ್ರಮ ಗೋ ಸಾಗಾಟಗಾರರು ವಾಹನವನ್ನು ರಸ್ತೆಯಲ್ಲಿಯೇ ಬಿಟ್ಟು ಬೆಂಗಾವಲಿಗಿದ್ದ ವಾಹನದಲ್ಲಿ ಪಾರಿಯಾಗಿದ್ದಾರೆ. ವಾಹನವನ್ನು ವಶಕ್ಕೆ ಪಡೆದಿರುವ ಡಿಸಿಐಬಿ ಪೊಲೀಸರು ಕಳವು ಮಾಡಿದ ಆರು ಜಾನುವಾರುಗಳನ್ನು ರಕ್ಷಿಸಿದ್ದಾರೆ.

DCIB police team rescue 6 cattles being smuggled

ಪರಾರಿಯಾದವರನ್ನು ಸಜಿಪ ಅಮ್ಮೆಮಾರ್ ನಿವಾಸಿಗಳಾದ ಫಾರೂಕ್ ಸಜಿಪ, ಅಮ್ಮೆಮ್ಮಾರ್, ಜೈನು ಯಾನೆ ಜೈನುದ್ದೀನ್ ಹಾಗು ಅರಾಫತ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳು ಫರಂಗಿಪೇಟೆ ನಿವಾಸಿಗಳೆಂದು ಪೊಲೀಸ್ ಮೂಲಗಳು ತಿಳಿಸಿವೆ.

English summary
Dakshina Kannada district DCIB police team waylaid a lorry illegally transporting 6 cattle near Punjalkatte near Mangaluru. In this incident accused escaped from the spot but they are identified.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X