ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುರತ್ಕಲ್ ಟೋಲ್ ಗೇಟ್ ರದ್ದು; ಸಚಿವ ಗಡ್ಕರಿ ಭರವಸೆ

|
Google Oneindia Kannada News

ಮಂಗಳೂರು, ಫೆಬ್ರವರಿ 12: ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಕುರಿತು ಭರವಸೆ ನೀಡಿದ್ದು, ಶೀಘ್ರವೇ ಸಭೆ ಕರೆಯಲು ಆದೇಶ ನೀಡುವುದಾಗಿ ಭರವಸೆ ನೀಡಿದ್ದಾರೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕರ್ನಾಟಕದ ಹಲವು ಸಂಸದರು ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ್ದರು. ರಾಜ್ಯದ ಹಲವು ರಸ್ತೆ ಯೋಜನೆಗೆಳ ಬಗ್ಗೆ ಮಾತುಕತೆ ನಡೆಸಿದರು.

2 ವರ್ಷಗಳಲ್ಲಿ ಹೆದ್ದಾರಿಗಳು ಟೋಲ್ ಪ್ಲಾಜಾ ಮುಕ್ತ: ಜಿಪಿಎಸ್ ವ್ಯವಸ್ಥೆಗೆ ಮುಂದಾದ ಸರ್ಕಾರ2 ವರ್ಷಗಳಲ್ಲಿ ಹೆದ್ದಾರಿಗಳು ಟೋಲ್ ಪ್ಲಾಜಾ ಮುಕ್ತ: ಜಿಪಿಎಸ್ ವ್ಯವಸ್ಥೆಗೆ ಮುಂದಾದ ಸರ್ಕಾರ

ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು-ಉಡುಪಿ ಹೆದ್ದಾರಿಯ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್‌ ರದ್ದುಪಡಿಸುವ ಬಗ್ಗೆ ಮನವಿ ಸಲ್ಲಿಸಿದರು. ಈ ಕುರಿತು ತೀರ್ಮಾನಿಸಲು ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸುವುದಾಗಿ ಸಚಿವರು ಭರವಸೆ ಕೊಟ್ಟಿದ್ದಾರೆ.

ಬೆಂಗಳೂರು-ಹಾಸನ ಹೆದ್ದಾರಿ ಟೋಲ್ ಶುಲ್ಕ ಏರಿಕೆ ಬೆಂಗಳೂರು-ಹಾಸನ ಹೆದ್ದಾರಿ ಟೋಲ್ ಶುಲ್ಕ ಏರಿಕೆ

 Decision On Cancellation Of Surathkal Toll Plaza Soon Says Nitin Gadkari

ಹಲವು ಯೋಜನೆಗಳು; ನಿತಿನ್ ಗಡ್ಕರಿ ಅವರು ಭಾರತ್ ಮಾಲಾ ಯೋಜನೆಯಡಿ ದ್ವಿಪಥ ರಸ್ತೆಯಾಗಿರುವ ಮುಲ್ಕಿ-ಕಟೀಲು-ಕೈಕಂಬ-ಪೊಳಲಿ-ಬಿ. ಸಿ. ರೋಡು-ಪಾಣೆ ಮಂಗಳೂರು- ತೊಕ್ಕೊಟ್ಟು ಸಂಪರ್ಕಿಸುವ ಮಂಗಳೂರು ನಗರ ಹೊರವರ್ತುಲ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸುವುದಾಗಿಯೂ ಹೇಳಿದ್ದಾರೆ.

ಬೆಳಗಾವಿ; ಬೈಪಾಸ್ ನಿರ್ಮಾಣಕ್ಕೆ ಕೃಷಿ ಭೂಮಿ, ರೈತರ ಪ್ರತಿಭಟನೆ ಬೆಳಗಾವಿ; ಬೈಪಾಸ್ ನಿರ್ಮಾಣಕ್ಕೆ ಕೃಷಿ ಭೂಮಿ, ರೈತರ ಪ್ರತಿಭಟನೆ

ರಾಜಧಾನಿ ಬೆಂಗಳೂರು-ಮಂಗಳೂರು ಸಂಪರ್ಕಿಸಲು ಪರ್ಯಾಯ ರಸ್ತೆಯಾಗಿರುವ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯನ್ನು ಮಾಣಿಯಿಂದ ಕುಶಾಲನಗರದ ತನಕ ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿಯೂ ನಿತಿನ್ ಗಡ್ಕರಿ ತಿಳಿಸಿದ್ದಾರೆ.

English summary
Dakshina Kannada MP Nalin Kumar Kateel met minister for road transport & highways Nitin Gadkari and request for Surathkal toll plaza cancellation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X