ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಬಿಕೆ: ಕೊರೊನಾವೈರಸ್‌ಗೆ ರಾಮಬಾಣ ಹಾಲೆ ಮರದ ರಸ!

|
Google Oneindia Kannada News

ಮಂಗಳೂರು, ಜು. 20: ಮಹಾಮಾರಿ ಕೊರೊನಾವೈರಸ್ ಮಧ್ಯೆ ಕರಾವಳಿ ಭಾಗದಲ್ಲಿ ಆಷಾಢ ಅಮಾವಾಸ್ಯೆ ಆಚರಣೆ ನಡೆದಿದೆ. ಅಮಾವಾಸ್ಯೆ ದಿನ ಕರಾವಳಿ ಭಾಗದಲ್ಲಿ ಹಾಲೆ ಮರದ ರಸ ಸೇವಿಸುವ ಸಂಪ್ರದಾಯವಿದೆ. ಅದ್ರಂತೆ ಇಂದು ಆಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕರಾವಳಿ ಜನತೆ ಹೆಚ್ಚಿನ ಉತ್ಸುಕತೆಯಿಂದ ಕಷಾಯ ಸೇವಿಸಿದರು. ಈ ಮೂಲಕ ಕೊರೊನಾವೈರಸ್‌ಗೂ ರಾಮಬಾಣ ಆಗುವ ನಂಬಿಕೆಯಿಂದ ಈ ಬಾರಿ ಕರಾವಳಿಯಾದ್ಯಂತ ಕಷಾಯವನ್ನ ಸೇವಿಸಿದ್ದಾರೆ. ಇನ್ನು ಕೊರೊನಾದಿಂದಾಗಿ ಈಗಾಗಲೇ ಕರಾವಳಿ ಮಂದಿ ಕಷಾಯದ ಮೊರೆ ಹೋಗಿದ್ದರು.

ಅಮೃತ ಬಳ್ಳಿ, ತುಳಸಿ ದಳದ ಕಷಾಯ ಸೇವನೆ ಮಾಡುತ್ತಾ ಇದ್ದಾರೆ. ಆದರೆ ವರ್ಷಕ್ಕೊಮ್ಮೆ ಆಟಿ ಅಮಾವಾಸ್ಯೆಯಂದು ಸೇವಿಸುವ ಈ ಹಾಲೆ ಮರ ರಸ ಔಷಧೀಯ ಗುಣ ಹೊಂದಿರುವ ನಂಬಿಕೆಯಿದೆ. ಸೂರ್ಯೋದಯಕ್ಕೂ ಮುನ್ನವೇ ತೊಗಟೆ ರಸ ಸಂಗ್ರಹಮಾಡಿ, ಬಳಿಕ ತೆಂಗಿನಕಾಯಿ ತುರಿ ಗಂಜಿ ಜೊತೆಗೆ ಕಷಾಯ ಸೇವಿಸುವಂತ ಸಂಪ್ರದಾಯ ಕರಾವಳಿಯಲ್ಲಿ ಇಂದಿಗೂ ನಡಿಯುತ್ತಿದೆ.

Good News: ಆಕ್ಸ್‌ಫರ್ಡ್ ಲಸಿಕೆ ಸುರಕ್ಷಿತ, ಭರವಸೆಯ ಫಲಿತಾಂಶGood News: ಆಕ್ಸ್‌ಫರ್ಡ್ ಲಸಿಕೆ ಸುರಕ್ಷಿತ, ಭರವಸೆಯ ಫಲಿತಾಂಶ

'

Decoction Of Marine Vine And Basil Juice Is Believed To Have Medicinal Properties

ಇನ್ನು ನಗರ ಪ್ರದೇಶಕ್ಕಿಂತಲೂ ಗ್ರಾಮೀಣ ಭಾಗದಲ್ಲಿ ಹಾಲೆ ಮರ ರಸ ಸವಿಯಲು ಜನರಲ್ಲಿ ಹೆಚ್ಚು ಉತ್ಸುಕತೆ ಇರುತ್ತೆ. ಆದ್ರೆ ಈ ಬಾರಿ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ನಗರದ ಮಂದಿಯಲ್ಲೂ ಹೆಚ್ಚಿನ ಉತ್ಸಾಹ ಇತ್ತು. ಯಾಕಂದ್ರೆ ಕೊರೊನಾ ಸೋಂಕಿಗೆ ಹಾಲೆ ಮರ ಕಷಾಯ ರಾಮಬಾಣವಾಗೋ ನಂಬಿಕೆ. ಹಾಗಾಗಿ ಈ ಬಾರಿ ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಟಿ ಅಮಾವಾಸ್ಯೆಯನ್ನ ಆಚರಣೆ ಮಾಡಿದ್ದಾರೆ.

English summary
Decoction of marine vine and basil juice is believed to have medicinal properties as it is consumed at least once a year. It is still customary on the coast to collect bark juice before sunrise and then serve it with coconut tomatoes and decoction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X