ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಶವಪತ್ತೆ

|
Google Oneindia Kannada News

ಮಂಗಳೂರು, ಜೂನ್ 20: ವಯೋವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮನಾಭ (78) ಮತ್ತು ಅವರ ಪತ್ನಿ ವಿಮಲಾ (65) ಎಂದು ಗುರುತಿಸಲಾಗಿದೆ.

ಐಷಾರಾಮಿ ಜೀವನ ನಡೆಸುತ್ತಿದ್ದ ಚೋರರ ಬಂಧನಐಷಾರಾಮಿ ಜೀವನ ನಡೆಸುತ್ತಿದ್ದ ಚೋರರ ಬಂಧನ

ಮೃತರಿಗೆ ಮೂವರು ಮಕ್ಕಳಿದ್ದಾರೆ. ಎಲ್ಲರೂ ವಿವಾಹಿತರಾಗಿದ್ದು, ಬೇರೆ ವಾಸವಾಗಿದ್ದಾರೆ. ಬುಧವಾರ ಮಧ್ಯಾಹ್ನ ಪದ್ಮನಾಭ ಅವರ ಅಳಿಯ ಉಮಾನಾಥ್ ಮಾವನ ಮನೆಗೆ ಬಂದಿದ್ದು, ಬಾಗಿಲು ಬಡಿದಾಗ ಯಾರೂ ಬಾಗಿಲು ತೆರೆಯಲಿಲ್ಲ. ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದುದರಿಂದ ಹಾಗೂ ಮನೆ ಒಳಗಿನಿಂದ ದುರ್ನಾತ ಬರುತ್ತಿದ್ದುದರಿಂದ ಅನುಮಾನಗೊಂಡು ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.

Decomposed body of couple found in Thokkottu

ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿದ್ದು, ಅಡುಗೆ ಕೋಣೆಯಲ್ಲಿ ಪದ್ಮನಾಭ್ ಮತ್ತು ವಿಮಲ ದಂಪತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

English summary
The burnt and decomposed body of a couple found at a house near Thokkottu. Deceased identified as Padmanabha (78) and Vimala (65). It is suspected to be Suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X