ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಸೋರಿಕೆ ವಿರುದ್ಧ ಕ್ರಮ: ಕಮಿಷನರ್
ಮಂಗಳೂರು, ಜನವರಿ 13: ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಮಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು "ಅಹ್ಮದ್ ಬಷೀರ್ ಹತ್ಯೆ ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ಆ ದೃಶ್ಯಗಳು ಮಾಧ್ಯಮಕ್ಕೆ ಸೋರಿಕೆಯಾಗಿದೆ. ಈ ಬಗ್ಗೆ ಖಾಸಗಿ ಕಟ್ಟಡದ ಮಾಲೀಕರನ್ನು ವಿಚಾರಣೆ ನಡೆಸಲಾಗಿದೆ. ಅವರು ತಾನು ಯಾರಿಗೂ ಆ ದೃಶ್ಯಾವಳಿಗಳನ್ನು ನೀಡಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಇಲಾಖೆಯ ಸಿಬ್ಬಂದಿ ಸೋರಿಕೆ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು," ಎಂದು ಅವರು ಸ್ಪಷ್ಟಪಡಿಸಿದರು.
"ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡೇಟಿನಿಂದ ಗಾಯಗೊಂಡ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುವುದು," ಎಂದು ಅವರು ವಿವರ ನೀಡಿದರು.

"ಈಗಾಗಲೇ ಬಂಧಿತ ಇಬ್ಬರು ಆರೋಪಿಗಳಾದ ನೌಷಾದ್ ಮತ್ತು ಮೊಹಮ್ಮದ್ ಇರ್ಷಾದ್ ಇವರನ್ನು ಒಂದು ವಾರ ಕಾಲ ಪೊಲೀಸ್ ಕಸ್ಟಡಿಯಲ್ಲಿ ತನಿಖೆ ನಡೆಸಲಾಗಿದೆ. ಪಿಂಕಿ ನವಾಜ್ ಹಾಗೂ ರಿಜ್ವಾನ್ ಅವರನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗುವುದು," ಎಂದು ಅವರು ತಿಳಿಸಿದರು.
ನಗರದಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಬಗ್ಗೆ ಆಳವಾದ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ ಅವರು, "ಈ ಬಾರಿ ನಡೆದ ಘಟನೆಯನ್ನು ಕೇವಲ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದ ಮಾತ್ರಕ್ಕೆ ಸುಮ್ಮನಾಗುವುದಿಲ್ಲ. ಇಂತಹ ಘಟನೆಗಳು ಯಾಕಾಗಿ ನಡೆಯುತ್ತಿದೆ? ಇದನ್ನು ಯಾರೆಲ್ಲ ಬೆಂಬಲಿಸುತ್ತಾರೆ? ಎಂಬ ಬಗ್ಗೆ ವಿಸ್ತೃತ ತನಿಖೆ ನಡೆಸುತ್ತೇವೆ," ಎಂದು ಸ್ಪಷ್ಟಪಡಿಸಿದರು.
ನಗರದಲ್ಲಿ ನಡೆದ ದೀಪಕ್ ರಾವ್, ಅಬ್ದುಲ್ ಬಷೀರ್ ಕೊಲೆ ಪ್ರಕರಣ ಸೇರಿದಂತೆ ಮುದಸ್ಸಿರ್ ಕೊಲೆಯತ್ನ ಪ್ರಕರಣಗಳ ತನಿಖೆಯನ್ನು ಎಸಿಪಿ ಮಟ್ಟದ ಅಧಿಕಾರಿಗಳು ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗೃಹ ಸಚಿವರು ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಟಿ.ಆರ್ ಸುರೇಶ್ ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications