ಕುಸ್ವಾರ್ ಇಲ್ಲದೆ ಕ್ರಿಸ್ಮಸ್ ಹಬ್ಬದ ಸಂಭ್ರಮ ಹೆಚ್ಚದು
ಮಂಗಳೂರು, ಡಿಸೆಂಬರ್. 24 : ನಗರದ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟಿರುವ ನಕ್ಷತ್ರಗಳು, ಜಗಮಗಿಸುವ ಗೂಡುದೀಪಗಳು, ಕ್ರಿಬ್ಸ್ ಗೆ ಬೇಕಾದ ವಸ್ತುಗಳು, ಇನ್ನು ಬೇಕರಿಗಳಲ್ಲಿ ಪ್ರದರ್ಶನಕ್ಕಿಟ್ಟಿರುವ ವಿವಿಧ ಆಕಾರದ ಕೇಕ್ ಗಳು ಹಾಗೂ ಬಗೆ-ಬಗೆಯ ತಿಂಡಿಗಳು ಯೇಸುವಿನ ಜನನದ ಆಗಮನವನ್ನು ಸಾರುತ್ತಿವೆ.
ಇನ್ನು ಕರಾವಳಿಯಲ್ಲಿ ಕುಸ್ವಾರ್ ಬಲು ಪ್ರಸಿದ್ಧಿ ಹೊಂದಿದೆ. ಈ ಕುಸ್ವಾರ್ ಎಂದಾಕ್ಷಣ ಗೋಲಿಯೂ, ಕಿಡಿಯೂ, ಕೂಲ್ ಕೂಲ್, ಗಜ್ಜಿಯಿ, ಅಕ್ಕಿ ಲಾಡು, ಖಾರಕಡ್ಡಿ ಬಾಯಲ್ಲಿ ನೀರು ಬರಿಸುತ್ತವೆ. [ಸಂತಾಕ್ಲಾಸ್ ವೇಷ ಧರಿಸಿ ಕ್ರಿಸ್ಮಸ್ ಶುಭಾಶಯ ಹೇಳುವ ಮಂಗಳೂರಿನ ಸಂತ]
ಕೆಲವರು ಮನೆಯಲ್ಲೇ ಕುಸ್ವಾರ್ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಕೆಲವರು ಬೇಕರಿಯ ಕುಸ್ವಾರ್ ಖಾದ್ಯಗಳನ್ನು ಖರೀದಿಸುತ್ತಾರೆ. ಇಲ್ಲಿ ಕೇಕ್ ಗಳಿಗೆ ಹೇಳಿಕೊಳ್ಳುವಂತಹ ಬೇಡಿಕೆ ಇಲ್ಲ. ಆದರೆ, ಕುಸ್ವಾರ್ ಗಳಿಗಂತೂ ಬೇಡಿಕೆ ಇದ್ದೇ ಇದೆ.

ಕರಾವಳಿಯ ಕ್ಯಾಥೊಲಿಕ್ ಬಂಧುಗಳು ಕುಸ್ವಾರ್ ಇಲ್ಲದೆ ಕ್ರಿಸ್ಮಸ್ ಹಬ್ಬವನ್ನು ಸರಿಯಾಗಿ ಆಚರಣೆಯೇ ಮಾಡೋದಿಲ್ಲ. ಇಂತಹ ವಿಶಿಷ್ಟ ಬೆಳವಣಿಗೆ ದೇಶ - ವಿದೇಶ ಯಾವುದೇ ಮೂಲೆಯಲ್ಲೂ ಕಾಣ ಸಿಗೋದಿಲ್ಲ.
ಮುಖ್ಯವಾಗಿ ಡಿಸೆಂಬರ್ ಮೊದಲ ವಾರದಲ್ಲಿಯೇ ಕುಸ್ವಾರ್ ಗಳ ಕಚ್ಚಾ ಸಾಮಗ್ರಿಗಳು ಮನೆ ತಲುಪುತ್ತವೆ. ನಂತರ ಡಿಸೆಂಬರ್ ದಾಟುತ್ತಿದಂತೆ ಕುಸ್ವಾರ್ ತಯಾರಿಯಲ್ಲಿ ತೊಡಗುತ್ತಾರೆ.

ಆಧುನಿಕ ಕಾಲದಲ್ಲಿ ಕೆಲಸದ ಒತ್ತಡ ಹಾಗು ಸಮಯದ ಅಭಾವಗಳು ಕಾಡುತ್ತಿರುವುದರಿಂದ ಇಂತಹ ಕುಸ್ವಾರ್ ತಿಂಡಿಗಳನ್ನು ಮನೆಯ ಸದಸ್ಯರು ಕೂಡಿಕೊಂಡು ಮಾಡುವುದಕ್ಕಿಂತ ಹೆಚ್ಚಾಗಿ ಬೇಕರಿಗಳಿಗೆ ಮೊರೆ ಹೋಗುತ್ತಾರೆ.
ಕುಸ್ವಾರ್ ಮೂಲತಃ ಗೋವಾ ರಾಜ್ಯದ್ದು: ಮೂಲತಃ ಗೋವಾ ರಾಜ್ಯದಿಂದ ಬಂದ ಪದ್ಧತಿಗಳಲ್ಲಿ ಕುಸ್ವಾರ್ ಒಂದು. ಅದರಲ್ಲೂ ವಿಶೇಷವಾಗಿ ಗೋವಾದಿಂದ ಕರಾವಳಿ ಕಡೆಗೆ ಹರಿದು ಬಂದ ಕ್ರೈಸ್ತರು ಅಲ್ಲಿನ ಕೆಲವೊಂದು ಸಂಪ್ರದಾಯ, ಆಚರಣೆ, ಆಹಾರ ಪದ್ದತಿಗಳನ್ನು ಕರಾವಳಿಯಲ್ಲಿ ಆಚರಣೆ ಮಾಡಲಾಗುತ್ತದೆ ಎನ್ನುತ್ತಾರೆ ಕೊಂಕಣಿ ಪ್ರಚಾರ ಸಂಚಾಲನ ಸಮಿತಿಯ ಕಾರ್ಯದರ್ಶಿ.

ಕುಸ್ವಾರ್ ತಯಾರಿಯಲ್ಲಿ ಎಲ್ಲರು ಜತೆಗೂಡುವ ಮೂಲಕ ಕುಟುಂಬದ ಸದ್ಯಸರ ಏಕತೆಯ ಸಂಕೇತ ಇಮ್ಮಡಿಗೊಳ್ಳುತ್ತದೆ. ಮನೆಮಂದಿಯೆಲ್ಲ ತಯಾರಿಸಿದ ಕುಸ್ವಾರ್ ಕ್ರಿಸ್ಮಸ್ ನ ಪ್ರೀತಿಯ ಸಂಕೇತವಾಗಿ ನೆರೆಮನೆಯ ಬಾಂಧವರಿಗೆ, ಜಾತಿ ಮತ ಭೇದವಿಲ್ಲದೆ ವಿತರಿಸುತ್ತಾರೆ. ಇದು ಖುಷಿ ಕೂಡುವ ವಿಷಯ.
ನಿಮ್ಮೆಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications