ಕರಾವಳಿಯಲ್ಲಿ ಬಿಸಿಲಿನ ತಾಪ:ಬಡವರ ಫ್ರಿಡ್ಜ್ ಗೆ ಭಾರೀ ಡಿಮ್ಯಾಂಡ್
ಮಂಗಳೂರು, ಏಪ್ರಿಲ್ 28:ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯಲ್ಲಿ ಬಿರು ಬಿಸಿಲು ಹೆಚ್ಚಿದ್ದು, ರಸ್ತೆಗಳಲ್ಲಿ ಜನ ಸಂಚಾರ ಕಡಿಮೆ ಯಾಗುತ್ತಿದೆ. ಸ್ವಲ್ಪ ದೂರ ನಡೆಯುವಷ್ಟರಲ್ಲೇ ಮೈಯೆಲ್ಲಾ ಬೆವರುಮಯ. ಈ ನಡುವೆ ಜನರನ್ನು ದಾಹ ಎಡೆಬಿಡದೆ ಕಾಡುತ್ತಿದೆ.
ಈ ಹಿನ್ನೆಲೆಯಲ್ಲಿ ತಂಪು ಪಾನೀಯಗಳಿಗೆ ಬೇಡಿಕೆ ಹೆಚ್ಚಿದೆ. ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಜನರು ಫ್ರಿಡ್ಜ್ ನೀರಿನ ಬದಲು, ಸಾಂಪ್ರದಾಯಿಕ ಮಡಕೆಗಳತ್ತ ಮುಖ ಮಾಡಿದ್ದಾರೆ.ಪರಿಣಾಮ ಮಡಿಕೆ ವ್ಯಾಪಾರಿಗಳ ವ್ಯಾಪಾರವೂ ವೃದ್ಧಿಸಿದೆ.
ಮಂಗಳೂರಿನ ವಿವಿಧೆಡೆ ಜನರು ಮಡಿಕೆ ಖರೀದಿಸುವ ದೃಶ್ಯಗಳು ಸಾಮಾನ್ಯವಾಗಿದೆ. ಬೇಸಿಗೆಯಲ್ಲಿ ಮುಖ್ಯ ವ್ಯಾಪಾರಗಳಲ್ಲಿ ಒಂದಾಗಿರುವ ಮಡಿಕೆ ವ್ಯಾಪಾರವೂ ಜನವರಿಯಿಂದಲೇ ಶುರುವಾಗಿದೆ.ನಾನಾ ಬಗೆಯ ಆಕೃತಿಯ ಮಡಿಕೆಗಳು ಗ್ರಾಹಕರನ್ನು ಸೆಳೆಯುತ್ತಿವೆ.

ದುಬಾರಿ ರೆಫ್ರಿಜಿರೇಟರ್ ಖರೀದಿಸಲಾಗದವರು ಮಡಿಕೆಯ ಮೊರೆ ಹೋಗುತ್ತಿದ್ದಾರೆ. ಎಂಥ ಸುಡುಬೇಸಗೆಯಲ್ಲೂ ವಿದ್ಯುತ್ ಅಗತ್ಯವಿಲ್ಲದೇ ತಂಪಾದ ನೀರು ಕೊಡುವ ಮಣ್ಣಿನ ಮಡಕೆ ಬಡವರ ಫ್ರಿಡ್ಜ್ ಎಂದೇ ಗುರುತಿಸಿಕೊಂಡಿದೆ. ಫ್ರಿಡ್ಜ್ನಲ್ಲಿನ ನೀರು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಅಭಿಪ್ರಾಯ ಇರುವುದರಿಂದ ಮಣ್ಣಿನ ಮಡಕೆಗೆ ಬೇಡಿಕೆ ವ್ಯಕ್ತವಾಗಿದೆ.

ಗಾತ್ರ ಹಾಗೂ ವಿನ್ಯಾಸ ಆಧರಿಸಿ 120ರಿಂದ 1000 ರೂಪಾಯಿವರೆಗೆ ಮಡಿಕೆಗಳಿಗೆ ದರ ನಿಗದಿಪಡಿಸಲಾಗಿದೆ. ಈ ಹಿಂದೆ ದಿನಕ್ಕೆ 10 ರಿಂದ 15 ಮಡಿಕೆ ಮಾರಾಟವಾಗುವಲ್ಲಿ ಪ್ರತಿದಿನ 50 ರಿಂದ 60 ಮಡಿಕೆಗಳು ಮಾರಾಟವಾಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications