ಮಂಗಳೂರಿನ ಸಹಕಾರಿ ಬ್ಯಾಂಕಿನ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡದ ಸಹಕಾರಿ ಬ್ಯಾಂಕಿನ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.
ಮಂಗಳೂರು, ಡಿಸೆಂಬರ್ 27: ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡದ ಸಹಕಾರಿ ಬ್ಯಾಂಕಿನ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.
ಅಪನಗದೀಕರಣದ ನಂತರ ಈ ಸಹಕಾರಿ ಬ್ಯಾಂಕುಗಳಲ್ಲಿ ಅಧಿಕ ಪ್ರಮಾಣದಲ್ಲಿ ಠೇವಣಿಯಾಗಿದ್ದರ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಹಠಾತ್ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಆರು ಅಧಿಕಾರಿಗಳು ಹಾಗೂ ಜಾರಿ ನಿರ್ದೇಶನಾಲಯದ ಮೂವರು ಅಧಿಅಕರಿಗಳು ಬ್ಯಾಂಕಿನ ಜಮೆ ಪುಸ್ತಕವನ್ನು ಹುಡುಕಾಡಿ, ನವೆಂಬರ್ 8ರ ನಂತರದ ಠೇವಣಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಕೊಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ ಸಹಕಾರಿ ಬ್ಯಾಂಕ್ ಕಚೇರಿ ಮೇಲೆ ಮೊದಲಿಗೆ ದಾಳಿ ನಡೆಸಲಾಯಿತು.
ಕಳೆದ ಒಂದು ವಾರದಿಂದ ಕರ್ನಾಟಕದ ವಿವಿಧೆಡೆ ಸಹಕಾರಿ ಬ್ಯಾಂಕುಗಳ ಮೇಲೆ ದಾಳಿ ನಡೆಸಲಾಗುತ್ತಿದೆ.ಬ್ಯಾಂಕುಗಳಲ್ಲಿ ಠೇವಣಿ ಇಡುವ ಮೂಲಕ ಕಾಳಧನವನ್ನು ಪರಿವರ್ತನೆ ಮಾಡುವ ವಿಧಾನದ ಮೇಲೆ ಕಡಿವಾಣ ಹಾಕಲು ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಂಡಿದೆ.
ಬ್ಯಾಂಕುಗಳಲ್ಲಿ ಕೆವೈಸಿ ಅರ್ಜಿ ತುಂಬದೆ ಸಹಕಾರಿ ಬ್ಯಾಂಕುಗಳಲ್ಲಿ ಹಣ ಠೇವಣಿ ಮಾಡುವ ಅಕ್ರಮ ವ್ಯವಸ್ಥೆಯನ್ನು ತಡೆಗಟ್ಟಲು ನಿರ್ಧರಿಸಲಾಗಿದೆ. ನವೆಂಬರ್ 8ರ ನಂತರ ಬ್ಯಾಂಕುಗಳಲ್ಲಿ ಅಧಿಕ ಪ್ರಮಾಣದ ಮೊತ್ತವನ್ನು ತಮ್ಮ ಖಾತೆಗೆ ಹಾಕಿರುವ ಗ್ರಾಹಕರ ವಿವರಗಳನ್ನು ನೀಡುವಂತೆ ಬ್ಯಾಂಕ್ ಗಳನ್ನು ಕೋರಲಾಗಿದೆ. (ಒನ್ಇಂಡಿಯಾ ಸುದ್ದಿ)
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications