Get Updates
Get notified of breaking news, exclusive insights, and must-see stories!

ಮಂಗಳೂರಿನ ಸಹಕಾರಿ ಬ್ಯಾಂಕಿನ ಮೇಲೆ ಐಟಿ ದಾಳಿ

ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡದ ಸಹಕಾರಿ ಬ್ಯಾಂಕಿನ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.

ಮಂಗಳೂರು, ಡಿಸೆಂಬರ್ 27: ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡದ ಸಹಕಾರಿ ಬ್ಯಾಂಕಿನ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.

ಅಪನಗದೀಕರಣದ ನಂತರ ಈ ಸಹಕಾರಿ ಬ್ಯಾಂಕುಗಳಲ್ಲಿ ಅಧಿಕ ಪ್ರಮಾಣದಲ್ಲಿ ಠೇವಣಿಯಾಗಿದ್ದರ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಹಠಾತ್ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

Demonetisation: Income tax raids at Mangaluru bank

ಆದಾಯ ತೆರಿಗೆ ಇಲಾಖೆಯ ಆರು ಅಧಿಕಾರಿಗಳು ಹಾಗೂ ಜಾರಿ ನಿರ್ದೇಶನಾಲಯದ ಮೂವರು ಅಧಿಅಕರಿಗಳು ಬ್ಯಾಂಕಿನ ಜಮೆ ಪುಸ್ತಕವನ್ನು ಹುಡುಕಾಡಿ, ನವೆಂಬರ್ 8ರ ನಂತರದ ಠೇವಣಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಕೊಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ ಸಹಕಾರಿ ಬ್ಯಾಂಕ್ ಕಚೇರಿ ಮೇಲೆ ಮೊದಲಿಗೆ ದಾಳಿ ನಡೆಸಲಾಯಿತು.

ಕಳೆದ ಒಂದು ವಾರದಿಂದ ಕರ್ನಾಟಕದ ವಿವಿಧೆಡೆ ಸಹಕಾರಿ ಬ್ಯಾಂಕುಗಳ ಮೇಲೆ ದಾಳಿ ನಡೆಸಲಾಗುತ್ತಿದೆ.ಬ್ಯಾಂಕುಗಳಲ್ಲಿ ಠೇವಣಿ ಇಡುವ ಮೂಲಕ ಕಾಳಧನವನ್ನು ಪರಿವರ್ತನೆ ಮಾಡುವ ವಿಧಾನದ ಮೇಲೆ ಕಡಿವಾಣ ಹಾಕಲು ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ಬ್ಯಾಂಕುಗಳಲ್ಲಿ ಕೆವೈಸಿ ಅರ್ಜಿ ತುಂಬದೆ ಸಹಕಾರಿ ಬ್ಯಾಂಕುಗಳಲ್ಲಿ ಹಣ ಠೇವಣಿ ಮಾಡುವ ಅಕ್ರಮ ವ್ಯವಸ್ಥೆಯನ್ನು ತಡೆಗಟ್ಟಲು ನಿರ್ಧರಿಸಲಾಗಿದೆ. ನವೆಂಬರ್ 8ರ ನಂತರ ಬ್ಯಾಂಕುಗಳಲ್ಲಿ ಅಧಿಕ ಪ್ರಮಾಣದ ಮೊತ್ತವನ್ನು ತಮ್ಮ ಖಾತೆಗೆ ಹಾಕಿರುವ ಗ್ರಾಹಕರ ವಿವರಗಳನ್ನು ನೀಡುವಂತೆ ಬ್ಯಾಂಕ್ ಗಳನ್ನು ಕೋರಲಾಗಿದೆ. (ಒನ್ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+