ಡೆಂಗ್ಯೂ ಬಗ್ಗೆ ಎಚ್ಚೆತ್ತುಕೊಳ್ಳಲೇಬೇಕಿದೆ- ಡಾ.ಡಿ.ವೀರೇಂದ್ರ ಹೆಗ್ಗಡೆ ಸಂದೇಶ
ಮಂಗಳೂರು, ಜುಲೈ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮುಂದಾಗಿದ್ದಾರೆ.
"ಶಿಕ್ಷಿತರಿರುವ, ಸ್ವಚ್ಛತೆ ಬಗ್ಗೆ ಕಾಳಜಿ ವಹಿಸುವ ಪ್ರಜ್ಞಾವಂತರೇ ಹೆಚ್ಚಿರುವ ಜಿಲ್ಲೆಯಲ್ಲೇ ಡೆಂಗ್ಯೂ ಹೆಚ್ಚಾಗಿರುವುದು ಆತಂಕಕಾರಿ" ಎಂದು ಹೇಳಿದರು.

"ಮಾರಕ ಡೆಂಗ್ಯೂ ಹರಡದಂತೆ ಜಿಲ್ಲೆಯ ಜನತೆ ಕೂಡಲೇ ಎಚ್ಚೆತ್ತುಕೊಳ್ಳಬೇಕು. ತಮ್ಮ ಮನೆ, ಕಟ್ಟಡದ ಪರಿಸರದಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸಿ ಸ್ವಚ್ಛತೆಯೆಡೆಗೆ ಗಮನ ಕೊಟ್ಟರೆ ಡೆಂಗ್ಯೂ ಹಾವಳಿ ನೀಗಬಹುದು. ಇದರಿಂದಾಗಿ ಸಾವು ಸಂಭವಿಸುತ್ತಿರುವಾಗ ಎಚ್ಚೆತ್ತುಕೊಳ್ಳಲೇಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ" ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.











Click it and Unblock the Notifications