ಮಂಗಳೂರಲ್ಲಿ ಡೆಂಗ್ಯೂ, ಮಲೇರಿಯಾ ಆತಂಕ
ಮಂಗಳೂರು, ಜುಲೈ 20 : ಮಂಗಳೂರಿನಲ್ಲಿ ಡೆಂಗ್ಯೂ ಜ್ವರ ಜನರಲ್ಲಿ ಆತಂಕ ಉಂಟು ಮಾಡಿದೆ. ಮಂಗಳೂರು ತಾಲೂಕು ಗ್ರಾಮಾಂತರ ಭಾಗದಲ್ಲಿ ಜುಲೈ ಮೊದಲ ವಾರದವರೆಗೂ 300ಕ್ಕೂ ಹೆಚ್ಚು ಶಂಕಿತ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಗ್ರಾಮೀಣ ಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಇದುವರೆಗೂ ಈ ಡೆಂಗ್ಯೂ ಮತ್ತು ಮಲೇರಿಯಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯ ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಮಂಗಳೂರು ಗ್ರಾಮಾಂತರದಲ್ಲಿ ಕಡಿಮೆ ಪ್ರಕರಣಗಳು ದಾಖಲಾಗಿವೆ.[ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರದ ದಾಂಗುಡಿಗೆ ಇಬ್ಬರು ಬಲಿ]

3 ತಂಡ ರಚನೆ : ಮಂಗಳೂರು ಗ್ರಾಮಾಂತರ ತಾಲೂಕು ಆರೋಗ್ಯಾಧಿಕಾರಿಯವರ ನೇತೃತ್ವದಲ್ಲಿ ಡೆಂಗ್ಯೂ, ಮಲೇರಿಯಾ, ಇಲಿಜ್ವರ ಇನ್ನಿತರ ಪ್ರಕರಣಗಳ ಪತ್ತೆ ಹಚ್ಚುವಿಕೆ ಹಾಗೂ ನಿಯಂತ್ರಣಾ ಕಾರ್ಯಾಚರಣೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.[ಡೆಂಗ್ಯೂ ಜ್ವರ ಹೆಚ್ಚಾಗಲು ರಬ್ಬರ್ ಬೆಳೆಗಾರರು ಕಾರಣ?]
ಈ ತಂಡದಲ್ಲಿ ಒಬ್ಬ ವೈದ್ಯರು, ಆರೋಗ್ಯ ಸಹಾಯಕಿಯರು, ಪುರುಷ ಸಹಾಯಕರು ಇದ್ದಾರೆ. ಜನರಿಗೆ ಜ್ವರದ ಬಗ್ಗೆ ಮಾಹಿತಿ ನೀಡುವುದು, ಜನವಸತಿ ಪ್ರದೇಶಗಳಲ್ಲಿ ಫಾಗಿಂಗ್ ಮಾಡುವುದು, ಜ್ವರ ಪ್ರಕರಣಗಳ ಮಾಹಿತಿ ಸಂಗ್ರಹ, ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳು , ಖಾಸಗಿ- ಆಸ್ಪತ್ರೆ ಕ್ಲಿನಿಕ್ಗಳ ಜತೆ ಸಂವಹನ ನಡೆಸಿ ತಂಡ ವರದಿ ನೀಡುತ್ತದೆ.[ಭಾರತದ ಮಾರುಕಟ್ಟೆಗೆ ಡೆಂಗ್ಯೂ ಲಸಿಕೆ ಯಾವಾಗ ಬರುತ್ತದೆ?]
ಮಂಗಳೂರಿನ ತಾಲೂಕಿನ ಅಲ್ಲಲ್ಲಿ ಇಲಿ ಜ್ವರವೂ ಕಾಣಿಸಿಕೊಂಡಿದ್ದು, ಇಲಿ ಜ್ವರದ ಬಾಧೆಯಿಂದ ಬಜಪೆ ಗ್ರಾಮ ಪಂಚಾಯಿತಿ ಸದಸ್ಯ ವಾಮನ ಗೌಡ (45) ಅವರು ಮೃತಪಟ್ಟಿದ್ದಾರೆ. ಇದು ಮಂಗಳೂರು ಗ್ರಾಮಾಂತರ ತಾಲೂಕಿನಲ್ಲಿ ಇಲಿಜ್ವರದಿಂದ ಸಂಭವಿಸಿದ ಮೊದಲ ಸಾವು.
ವಿಶ್ರಾಂತಿ ಮುಖ್ಯ : ಎಲ್ಲಾ ಜ್ವರ ಪ್ರಕರಣಗಳಿಗೂ ಎಲಿಜಾ ರಕ್ತ ಪರೀಕ್ಷೆ ಮಾಡಲಾಗುವುದಿಲ್ಲ. ಶಂಕಿತ ಎಂದು ಕಂಡು ಬಂದ ಪ್ರಕರಣಗಳನ್ನು ಎಲಿಜಾ ಟೆಸ್ಟ್ಗೆ ಒಳಪಡಿಸಲಾಗುತ್ತದೆ. ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ, ವಿಶ್ರಾಂತಿ, ದ್ರಾವಣಾಂಶ ಸೇವೆನೆ, ಅತೀ ಮುಖ್ಯ. ಜತೆಗೆ ವಾಸವಿರುವ ಪ್ರದೇಶದ ಶುಚಿತ್ವ ಬಹಳ ಮುಖ್ಯ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications