ಮಹತ್ವ ಪಡೆದುಕೊಂಡ ಸಿದ್ದರಾಮಯ್ಯ-ಪರಮೇಶ್ವರ್ ರಹಸ್ಯ ಮಾತುಕತೆ
ಮಂಗಳೂರು ಜೂನ್. 25 : ರಾಜ್ಯ ರಾಜಕೀಯದಲ್ಲಿ ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನೂತನ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯ ದಿನ ಹತ್ತಿರವಾಗುತ್ತಿದ್ದಂತೆ ರಾಜಕೀಯ ವಯಲದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಮಹತ್ವ ಪಡೆಯುತ್ತಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಗೆ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಏಕಾಏಕಿ ರಾಜಕೀಯವಾಗಿ ಚುರುಕಾಗಿದ್ದಾರೆ.
ಒಬ್ಬರ ಹಿಂದೆ ಮತ್ತೊಬ್ಬರಂತೆ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ಹಾಗೂ ಚರ್ಚೆ ನಡೆಸುತ್ತಿರುವ ಸಿದ್ದರಾಮಯ್ಯ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರ ರಾಜಕೀಯ ಶಕ್ತಿ ಕೇಂದ್ರವಾಗಿ ಬದಲಾಗಿದೆ.
ಭಾನುವಾರ ಏಕಾಏಕಿ ಉಪಮುಖ್ಯಮಂತ್ರಿ ಡಾ .ಜಿ ಪರಮೇಶ್ವರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಿ. ಪರಮೇಶ್ವರ್ ನೇರವಾಗಿ ಧರ್ಮಸ್ಥಳಕ್ಕೆ ತೆರಳಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪರಮೇಶ್ವರ್ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪರಮೇಶ್ವರ್ , ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸುವುದು ಸ್ವಾಭಾವಿಕ. ಅದರಲ್ಲಿ ಹೊಸತೇನಿಲ್ಲ. ಹಾಗಂತ ಹಳೇ ಕಾರ್ಯಕ್ರಮಗಳನ್ನು ಬದಲು ಮಾಡುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿದ್ದ ಎಲ್ಲ ಭರವಸೆಗಳನ್ನು ಮುಂದುವರಿಸುತ್ತೇನೆ
ತೆಗೆದುಕೊಳ್ಳುವುದಿಲ್ಲ. ನಿಗಮ ಮಂಡಳಿ, ಸಂಪುಟ ರಚನೆ ಇರಬಹುದು ಎಲ್ಲವನ್ನೂ ಅವರೊಂದಿಗೆ ಚರ್ಚಿಸುತ್ತೇನೆ. ನಿಗಮ ಮಂಡಳಿಗೆ ಒಂದಷ್ಟು ಹೆಸರು ಇಟ್ಟುಕೊಂಡು ಬಂದಿದ್ದೇನೆ.

ಸಾಲಮನ್ನಾಕ್ಕೆ ಮುಖ್ಯಮಂತ್ರಿ ಅವರು ಕೇಂದ್ರದ ಬಳಿ 50 ಸಾವಿರ ಕೋಟಿ ಕೇಳಿದ್ದಾರೆ. ರಾಜ್ಯದ ಕಷ್ಟದ ಕುರಿತು ಪ್ರಧಾನಿ ಅವರಿಗೆ ವಿವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು. ಹಾಗಾಗಿ ಬಜೆಟ್ ನಲ್ಲಿ ಸಾಲಮನ್ನಾ ಬಗ್ಗೆ ನಿರ್ಧರಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮೈತ್ರಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನಲ್ಲಿ ಅವರು ಈ ವರೆಗೂ ಹೇಳಿಕೊಂಡಿಲ್ಲ. ಏನಿದ್ದರೂ ಅವರೊಂದಿಗೆ ಚರ್ಚಿಸುತ್ತೇನೆ ಎಂದರು.
ನಂತರ ಶಾಂತಿವನಕ್ಕೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪರಮೇಶ್ವರ್ ರಹಸ್ಯ ಮಾತುಕತೆ ನಡೆಸಿರುವುದು ಈಗ ಮಹತ್ವ ಪಡೆದಿದೆ. ಪ್ರಕೃತಿ ಚಿಕಿತ್ಸಾಲಯದ ಕೊಠಡಿಯಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ಗಂಟೆ ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಇತರ ಯಾವುದೇ ನಾಯಕರಿಗೆ ಕೊಠಡಿಯೊಳಗೆ ಪ್ರವೇಶ ಇರಲಿಲ್ಲ.
ಚರ್ಚೆ ಸಂದರ್ಭದಲ್ಲಿ ಸಾಲಮನ್ನಾ, ನಿಗಮ ಮಂಡಳಿ ವಿಚಾರದಲ್ಲಿ ನಿರ್ಣಾಯಕ ಮಾತುಕತೆ ನಡೆದಿದೆ. ಅದಲ್ಲದೇ ಕೆಲ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications