ಫೇಸ್ಬುಕ್ ನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವ ಒಳಗೆ
ಮಂಗಳೂರು, ಜನವರಿ. 12 : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವನನ್ನು ಬುಧವಾರ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ದೀಪಕ್ ಕಾಮತ್ ಎಂಬಾತ ಯುವಕ ಇತ್ತೀಚೆಗೆ ಫೇಸ್ ಬುಕ್ ನಲ್ಲಿ ದಲಿತರು ಮೋಸಗಾರರು, ದ್ರೋಹಿಗಳು ಎಂದು ಅಶುದ್ಧ ಶಬ್ದಗಳಿಂದ ಅಂಬೇಡ್ಕರ್ ಹಾಗೂ ದಲಿತರ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಹಾಕಿ ನಿಂದಿಸಿದ್ದಾನೆ.

ಇದರಿಂದ ಆಕ್ರೋಶಗೊಂಡ ದಲಿತ ಸಂಘಟನೆಳ ಒಕ್ಕೂಟ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಧಾಖಲಿಸಿಕೊಂಡ ಪೊಲೀಸರು ದೀಪಕ್ ಕಾಮತ್ ಗಾಗಿ ಶೋಧ ನಡೆಸಿ ಎರಡು ತಿಂಗಳ ನಂತರ ಬಂಧಿಸುವಲ್ಲಿ ಪಾಂಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.












Click it and Unblock the Notifications