ಕಾಲೇಜು ಎಲೆಕ್ಷನ್ ಬ್ಯಾನರ್ ಆದ ಮಂಗಳೂರು ಎಂಜಿ ರಸ್ತೆ ಸೂಚನಾ ಫಲಕ
ಮಂಗಳೂರು, ಆಗಸ್ಟ್. 08 : ಗೋಡೆ, ಬೋರ್ಡ್ ಗಳ ಮೇಲೆ ದಪ್ಪ ದಪ್ಪ ಅಕ್ಷರಗಳಲ್ಲಿ 'ಭಿತ್ತಿ ಪತ್ರಗಳನ್ನು ಅಂಟಿಸಬೇಡಿ' ಎಂಬ ಸೂಚನೆಗಳಿದ್ದರೂ, ಅದನ್ನು ಪಾಲಿಸದ ವಿದ್ಯಾರ್ಥಿಗಳು ನಿಯಮಬಾಹಿರ ಕೃತ್ಯ ಎಸಗಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಮ್ಮ ಚುನಾವಣಾ ಪ್ರಚಾರದ ಕರಪತ್ರಗಳನ್ನು ಮಹಾತ್ಮ ಗಾಂಧಿ ರಸ್ತೆ ಬದಿಯ ದಾರಿ ಸೂಚನಾ ಫಲಕದ ಮೇಲೆ ಅಂಟಿಸಿ ದಾರಿಹೋಕರಿಗೆ ವಿಳಾಸವೇ ಗೊತ್ತಾಗದಂತೆ ಮಾಡಿದ್ದಾರೆ.[ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಲ್ಲದಿರಿ, ಆಯಾಸ ಪಡದಿರಿ]

ನಗರದಲ್ಲಿ ಅಳವಡಿಸಲಾಗಿದ್ದ ರಸ್ತೆ ಸೂಚನಾ ಫಲಕವೊಂದು ತನ್ನ ಮೈಬಣ್ಣ ಕಳೆದುಕೊಂಡು ಅಸ್ಪಷ್ಟವಾಗಿತ್ತು. ಇದರಿಂದ ದಾರಿಹೋಕರಿಗೆ ಓದಲು ಕಷ್ಟವಾಗಿ ವಿಳಾಸ ಹುಡುಕಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ದಾರಿಹೋಕರ ಸಮಸ್ಯೆ ಮನಗಂಡ ಮಂಗಳೂರಿನ ರಾಮಕೃಷ್ಣ ಮಿಶನ್ ಫೌಂಡೇಶನ್ ಸಂಸ್ಥೆ 'ಸ್ವಚ್ಛ ಮಂಗಳೂರು ಅಭಿಯಾನ'ದ ಅಡಿಯಲ್ಲಿ ದಾರಿ ಸೂಚನಾ ಫಲಕವನ್ನು ಸರ್ಕಾರದ ಅನುದಾನ ಬಯಸದೆ ನವೀಕರಿಸಿತ್ತು.
ಆದರೆ ಕಾಲೇಜು ವಿದ್ಯಾರ್ಥಿಗಳು ಸೂಚನಾ ಫಲಕದ ಮೇಲೆ ಕರಪತ್ರ ಅಂಟಿಸಿ ಅವಿದ್ಯಾವಂತರಂತೆ ವರ್ತಿಸಿ, ತೊಂದರೆ ಎಸಗಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ತಕ್ಷಣ ಚುನಾವಣಾ ಪ್ರಚಾರದ ಕರಪತ್ರಗಳನ್ನು ತೆಗೆದುಹಾಕಿ, ವಿಳಾಸ ಹುಡುಕಾಟದಲ್ಲಿ ಉಂಟಾಗುತ್ತಿರುವ ತೊಂದರೆ ನಿವಾರಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಬಳಿ ದೂರು ಸಲ್ಲಿಸಲಾಗುವುದು ಎಂದು ದಾರಿಹೋಕರು ಎಚ್ಚರಿಕೆ ನೀಡಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications