ಕಾಲೇಜು ಎಲೆಕ್ಷನ್ ಬ್ಯಾನರ್ ಆದ ಮಂಗಳೂರು ಎಂಜಿ ರಸ್ತೆ ಸೂಚನಾ ಫಲಕ
ಮಂಗಳೂರು, ಆಗಸ್ಟ್. 08 : ಗೋಡೆ, ಬೋರ್ಡ್ ಗಳ ಮೇಲೆ ದಪ್ಪ ದಪ್ಪ ಅಕ್ಷರಗಳಲ್ಲಿ 'ಭಿತ್ತಿ ಪತ್ರಗಳನ್ನು ಅಂಟಿಸಬೇಡಿ' ಎಂಬ ಸೂಚನೆಗಳಿದ್ದರೂ, ಅದನ್ನು ಪಾಲಿಸದ ವಿದ್ಯಾರ್ಥಿಗಳು ನಿಯಮಬಾಹಿರ ಕೃತ್ಯ ಎಸಗಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಮ್ಮ ಚುನಾವಣಾ ಪ್ರಚಾರದ ಕರಪತ್ರಗಳನ್ನು ಮಹಾತ್ಮ ಗಾಂಧಿ ರಸ್ತೆ ಬದಿಯ ದಾರಿ ಸೂಚನಾ ಫಲಕದ ಮೇಲೆ ಅಂಟಿಸಿ ದಾರಿಹೋಕರಿಗೆ ವಿಳಾಸವೇ ಗೊತ್ತಾಗದಂತೆ ಮಾಡಿದ್ದಾರೆ.[ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಲ್ಲದಿರಿ, ಆಯಾಸ ಪಡದಿರಿ]

ನಗರದಲ್ಲಿ ಅಳವಡಿಸಲಾಗಿದ್ದ ರಸ್ತೆ ಸೂಚನಾ ಫಲಕವೊಂದು ತನ್ನ ಮೈಬಣ್ಣ ಕಳೆದುಕೊಂಡು ಅಸ್ಪಷ್ಟವಾಗಿತ್ತು. ಇದರಿಂದ ದಾರಿಹೋಕರಿಗೆ ಓದಲು ಕಷ್ಟವಾಗಿ ವಿಳಾಸ ಹುಡುಕಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ದಾರಿಹೋಕರ ಸಮಸ್ಯೆ ಮನಗಂಡ ಮಂಗಳೂರಿನ ರಾಮಕೃಷ್ಣ ಮಿಶನ್ ಫೌಂಡೇಶನ್ ಸಂಸ್ಥೆ 'ಸ್ವಚ್ಛ ಮಂಗಳೂರು ಅಭಿಯಾನ'ದ ಅಡಿಯಲ್ಲಿ ದಾರಿ ಸೂಚನಾ ಫಲಕವನ್ನು ಸರ್ಕಾರದ ಅನುದಾನ ಬಯಸದೆ ನವೀಕರಿಸಿತ್ತು.
ಆದರೆ ಕಾಲೇಜು ವಿದ್ಯಾರ್ಥಿಗಳು ಸೂಚನಾ ಫಲಕದ ಮೇಲೆ ಕರಪತ್ರ ಅಂಟಿಸಿ ಅವಿದ್ಯಾವಂತರಂತೆ ವರ್ತಿಸಿ, ತೊಂದರೆ ಎಸಗಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ತಕ್ಷಣ ಚುನಾವಣಾ ಪ್ರಚಾರದ ಕರಪತ್ರಗಳನ್ನು ತೆಗೆದುಹಾಕಿ, ವಿಳಾಸ ಹುಡುಕಾಟದಲ್ಲಿ ಉಂಟಾಗುತ್ತಿರುವ ತೊಂದರೆ ನಿವಾರಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಬಳಿ ದೂರು ಸಲ್ಲಿಸಲಾಗುವುದು ಎಂದು ದಾರಿಹೋಕರು ಎಚ್ಚರಿಕೆ ನೀಡಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications