ಮಂಗಳೂರು ವೆಂಕಟರಮಣ ದೇವಳಕ್ಕೆ ಕಾಶೀ ಶ್ರೀಗಳಿಗೆ ಭವ್ಯ ಸ್ವಾಗತ
ಮಂಗಳೂರು, ನ 12: ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಳಕ್ಕೆ ಸಮಾಜ ಭಾಂದವರ ಬಿನ್ನಹದ ಮೇರೆಗೆ ಶನಿವಾರ (ನ. 11) ರಾತ್ರಿ 7. 30ಕ್ಕೆ ಚಿತ್ತೈಸಿದ್ದಾರೆ.
ಈ ಪ್ರಯುಕ್ತ ಶ್ರೀ ಗಳವರಿಗೆ ರಥಬೀದಿಯ ಸ್ವದೇಶಿ ಸ್ಟೋರ್ಸ್ ಬಳಿಯಿಂದ ಸಕಲ ಆದರ ಗೌರವ ಪೂರ್ವಕ ವಾದ್ಯ ಘೋಷ್ಠಿ ಹಾಗೂ ಬಿರುದಾವಳಿಗಳೊಂದಿಗೆ ಭವ್ಯ ಸ್ವಾಗತ ನೀಡಲಾಯಿತು. ಕೊಂಚಾಡಿಯಲ್ಲಿರುವ ಸ್ವಮಠದಿಂದ ಶ್ರೀಗಳವರು ಆಗಮಿಸಿ ಭವ್ಯ ಸ್ವಾಗತದ ಬಳಿಕ ಸ್ವಾಮೀಜಿಯವರು ಶ್ರೀ ದೇವರ ದರ್ಶನ ಪಡೆದರು.

ಬಳಿಕ, ರಾತ್ರಿ ಪೂಜೆ , ಶ್ರೀಗಳವರಿಗೆ ದೇವಳ ಹಾಗೂ ಸಮಾಜ ಭಾಂದವರ ವತಿಯಿಂದ ಪಾದಪೂಜೆ, ಬಳಿಕ ದೇವಳದ ವಸಂತಮಂಟಪದಲ್ಲಿ ಸ್ವಾಮೀಜಿಯವರಿಂದ ಆಶೀರ್ವಚನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಾವಿರಾರು ಜಿಎಸ್ಬಿ ಸಮಾಜ ಬಾಂಧವರು ಪಾಲ್ಗೊಂಡರು.
ದೇವಳದ ಆಡಳಿತ ಮೊಕ್ತೇಸರ ಪದ್ಮನಾಭ ಪೈ, ಜಯರಾಜ್ ಪೈ, ಅಡಿಗೆ ಕೃಷ್ಣ ಶೆಣೈ , ವೀರ ವೆಂಕಟೇಶ್ ಚಾರಿಟೇಬಲ್ ಟ್ರಸ್ಟಿನ ಗಣಪತಿ ಪೈ , ಎಂ. ಜಗನ್ನಾಥ್ ಕಾಮತ್ ಮತ್ತು ಜಿಲ್ಲೆಯ ಅನೇಕ ದೇವಳ , ಭಜನಾ ಮಂದಿರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೊಂಚಾಡಿಯ ವೆಂಕಟರಮಣ ದೇವರಿಗೆ 50ನೆಯ ಪ್ರತಿಷ್ಠಾ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಶೀ ಮಠದ ಶ್ರೀಗಳಾದ ಸಂಯಮೀಂದ್ರತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಗುರುವಾರ (ನ 9) ದೇವರಿಗೆ ಸಹಸ್ರ ಕುಂಭಾಭಿಷೇಕ ವಿಜೃಂಭಣೆಯಿಂದ ನೆರವೇರಿತ್ತು. (ಚಿತ್ರ : ಮಂಜು ನೀರೇಶ್ವಾಲ್ಯ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications