ಮಂಗಳೂರು ವೆಂಕಟರಮಣ ದೇವಳಕ್ಕೆ ಕಾಶೀ ಶ್ರೀಗಳಿಗೆ ಭವ್ಯ ಸ್ವಾಗತ
ಮಂಗಳೂರು, ನ 12: ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಳಕ್ಕೆ ಸಮಾಜ ಭಾಂದವರ ಬಿನ್ನಹದ ಮೇರೆಗೆ ಶನಿವಾರ (ನ. 11) ರಾತ್ರಿ 7. 30ಕ್ಕೆ ಚಿತ್ತೈಸಿದ್ದಾರೆ.
ಈ ಪ್ರಯುಕ್ತ ಶ್ರೀ ಗಳವರಿಗೆ ರಥಬೀದಿಯ ಸ್ವದೇಶಿ ಸ್ಟೋರ್ಸ್ ಬಳಿಯಿಂದ ಸಕಲ ಆದರ ಗೌರವ ಪೂರ್ವಕ ವಾದ್ಯ ಘೋಷ್ಠಿ ಹಾಗೂ ಬಿರುದಾವಳಿಗಳೊಂದಿಗೆ ಭವ್ಯ ಸ್ವಾಗತ ನೀಡಲಾಯಿತು. ಕೊಂಚಾಡಿಯಲ್ಲಿರುವ ಸ್ವಮಠದಿಂದ ಶ್ರೀಗಳವರು ಆಗಮಿಸಿ ಭವ್ಯ ಸ್ವಾಗತದ ಬಳಿಕ ಸ್ವಾಮೀಜಿಯವರು ಶ್ರೀ ದೇವರ ದರ್ಶನ ಪಡೆದರು.

ಬಳಿಕ, ರಾತ್ರಿ ಪೂಜೆ , ಶ್ರೀಗಳವರಿಗೆ ದೇವಳ ಹಾಗೂ ಸಮಾಜ ಭಾಂದವರ ವತಿಯಿಂದ ಪಾದಪೂಜೆ, ಬಳಿಕ ದೇವಳದ ವಸಂತಮಂಟಪದಲ್ಲಿ ಸ್ವಾಮೀಜಿಯವರಿಂದ ಆಶೀರ್ವಚನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಾವಿರಾರು ಜಿಎಸ್ಬಿ ಸಮಾಜ ಬಾಂಧವರು ಪಾಲ್ಗೊಂಡರು.
ದೇವಳದ ಆಡಳಿತ ಮೊಕ್ತೇಸರ ಪದ್ಮನಾಭ ಪೈ, ಜಯರಾಜ್ ಪೈ, ಅಡಿಗೆ ಕೃಷ್ಣ ಶೆಣೈ , ವೀರ ವೆಂಕಟೇಶ್ ಚಾರಿಟೇಬಲ್ ಟ್ರಸ್ಟಿನ ಗಣಪತಿ ಪೈ , ಎಂ. ಜಗನ್ನಾಥ್ ಕಾಮತ್ ಮತ್ತು ಜಿಲ್ಲೆಯ ಅನೇಕ ದೇವಳ , ಭಜನಾ ಮಂದಿರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೊಂಚಾಡಿಯ ವೆಂಕಟರಮಣ ದೇವರಿಗೆ 50ನೆಯ ಪ್ರತಿಷ್ಠಾ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಶೀ ಮಠದ ಶ್ರೀಗಳಾದ ಸಂಯಮೀಂದ್ರತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಗುರುವಾರ (ನ 9) ದೇವರಿಗೆ ಸಹಸ್ರ ಕುಂಭಾಭಿಷೇಕ ವಿಜೃಂಭಣೆಯಿಂದ ನೆರವೇರಿತ್ತು. (ಚಿತ್ರ : ಮಂಜು ನೀರೇಶ್ವಾಲ್ಯ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications