ಕೋಮಾ ಸ್ಥಿತಿಗೆ ತಲುಪಿದ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್
ಮಂಗಳೂರು, ಡಿಸೆಂಬರ್ 06: ಬಿಜೆಪಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 4 ಬಾರಿ ಸತತವಾಗಿ ಗೆಲುವು ಸಾಧಿಸಿದ್ದ ಧನಂಜಯ ಕುಮಾರ್ ನೆನೆಪಿದೆಯೇ? ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿ ಸದ್ದು ಮಾಡಿದ್ದ ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಇದೀಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ ಒಂದು ಮಾಹಿತಿಯ ಪ್ರಕಾರ ಇತ್ತೀಚೆಗೆ ಅವರ ಆರೋಗ್ಯ ತೀರಾ ಬಿಗಡಾಯಿಸಿದ ಕಾರಣ ಧನಂಜಯ ಕುಮಾರ್ ಕೋಮಾ ಸ್ಥಿತಿಯಲ್ಲಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 67 ವರ್ಷದ ಧನಂಜಯ ಕುಮಾರ್ ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಗುರುತು ಹಿಡಿಯಲಾರದಷ್ಟು ಅವರು ಕೃಶರಾಗಿದ್ದಾರೆ.
ವೇಣೂರಿನ ಜೈನ ಮನೆತನದಲ್ಲಿ ಜನಿಸಿದ ಧನಂಜಯ್ ಕುಮಾರ್ ಉಡುಪಿ ವೈಕುಂಠ ಬಾಳಿಗ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮಂಗಳೂರಿನಲ್ಲಿ ವೃತ್ತಿ ಅರಂಭಿಸಿದರು. ಆ ನಂತರ ಜನಸಂಘದ ಮೂಲಕ ರಾಜಕೀಯ ಪ್ರವೇಶಿಸಿದರು.
ಬಳಿಕ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ, ಯುವಮೋರ್ಚಾದ ರಾಜ್ಯಾಧ್ಯಕ್ಷ , ಅಖಿಲ ಭಾರತ ಉಪಾಧ್ಯಕ್ಷ ಸಹಿತ ಹಲವು ಹುದ್ದೆಗಳನ್ನು ನಿರ್ವಹಿಸಿದರು.

ಪ್ರಥಮ ಬಾರಿಗೆ ಸಂಸದ
1983ರ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಗೆದ್ದು ಶಾಸಕರಾದರು. ಬಳಿಕ 85ರ ಚುನಾವಣೆಯಲ್ಲಿ ಪರಾಭವಗೊಂಡರು. 1989 ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಆದರೆ 1991 ರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ಸಂಸದರಾದರು.

ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗ
ಆ ನಂತರ 1996, 98, 99ರ ಚುನಾವಣೆಯಲ್ಲಿ ಸತತವಾಗಿ ಗೆಲುವು ಸಾಧಿಸಿದರು. 1998ರಲ್ಲಿ ವಾಜಪೇಯಿ ಸರಕಾರದಲ್ಲಿ ಕ್ಯಾಬಿನೆಟ್ ಸಚಿವ, 1999 ರಲ್ಲಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗ.

ಧನಂಜಕುಮಾರ್ ಮೇಲೇಳಲೇ ಇಲ್ಲ
ಅಲ್ಪಸಂಖ್ಯಾತ ಜೈನ ಸಮುದಾಯದ ಧನಂಜಯ ಕುಮಾರ್, ಕೆಲ ವರ್ಷಗಳ ಹಿಂದೆ ಬಿಜೆಪಿ ಭೀಷ್ಮ ಅಡ್ವಾಣಿ ಅವಕೃಪೆಗೆ ಈಡಾಗಿ ರಾಜಕೀಯ ಅವನತಿಯತ್ತ ಮುಖ ಮಾಡಿದರು. ರಾಜಕೀಯ ಬದಲಾವಣೆಯಿಂದ ಕಾಂಗ್ರೆಸ್, ಜೆಡಿಎಸ್ ಗೂ ಎಡತಾಕಿದರಾದರೂ ಈ ಘಟನೆ ಬಳಿಕ ಮತ್ತೆ ರಾಜಕೀಯವಾಗಿ ಧನಂಜಕುಮಾರ್ ಮೇಲೇಳಲೇ ಇಲ್ಲ.

ಜೀವನ್ಮರಣದ ನಡುವೆ ಹೋರಾಟ
ಈಗ ಕಳೆದ ನಾಲ್ಕು ತಿಂಗಳಿಂದಲೂ ಧನಂಜಯ ಕುಮಾರ್ ಕೋಮಾ ಸ್ಥಿತಿಯಲ್ಲಿದ್ದಾರೆ. ಮಂಗಳೂರಿನ ಆಸ್ಪತ್ರೆ ಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications