ಮಂಗಳೂರಿನಲ್ಲಿ ಮತ್ತೆ ಧರ್ಮ ದಂಗಲ್: ಕಾಂಗ್ರೆಸ್ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ
ಮಂಗಳೂರು, ಡಿಸೆಂಬರ್ 07: ಮಂಗಳೂರಿನಲ್ಲಿ ವ್ಯಾಪಾರದಲ್ಲಿ ಧರ್ಮ ದಂಗಲ್ ಮತ್ತೆ ಮುನ್ನಲೆಗೆ ಬಂದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಠಿ ಮಹೋತ್ಸವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಿರುವ ಆರೋಪ ಕೇಳಿಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಈ ಷಷ್ಟಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ವ್ಯಾಪಾರ ನಡೆಯುತ್ತದೆ. ಆದರೆ ಇಲ್ಲಿ ಧಾರ್ಮಿಕ ತಾರತಮ್ಯ ನಡೆದಿದೆ.

ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಮಂಡಳಿ ಷಷ್ಟಿ ಸಂತೆ ವ್ಯಾಪಾರದ ಹಂಚಿಕೆ ನಡೆಸಿದೆ. ಈ ವೇಳೆ ಜಾಗ ಕೇಳಲು ಹೋಗಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರಾಕರಣೆ ಮಾಡಲಾಗಿದೆ. ಬೇಕಾದರೆ ಹಿಂದೂಗಳ ಹೆಸರಿನಲ್ಲಿ ಅಂಗಡಿ ಪಡೆಯುವಂತೆ ಆಡಳಿತ ಮಂಡಳಿ ಸೂಚಿಸಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗುತ್ತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬಡ ಸಂತೆ ವ್ಯಾಪಾರಿಗಳ ಜೊತೆ ನಿಲ್ಲಲಾಗದ ಸರ್ಕಾರಕ್ಕೆ ಧಿಕ್ಕಾರ ಎಂದು ಮುಸ್ಲಿಂ ವ್ಯಾಪಾರಿಗಳು ಕಿಡಿಕಾರಿದ್ದಾರೆ.
ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದೆ. ಆದರೆ ವ್ಯಾಪಾರಕ್ಕೆ ಜಾಗ ಕೇಳಲು ಹೋಗಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರಾಕರಣೆ ಮಾಡಲಾಗಿದೆ. ಕಳೆದ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ಕುಡುಪು ದೇವಸ್ಥಾನದಲ್ಲಿ ವ್ಯಾಪಾರ ನಿರಾಕರಣೆ ಮಾಡಲಾಗಿತ್ತು. ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶ ಕೊಡುತ್ತಿಲ್ಲ ಎಂದು ಬೀದಿ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಈ ಧರ್ಮ ತಾರತಮ್ಯದ ಬಗ್ಗೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಸಮಸ್ಯೆಗೆ ಪರಿಹಾರ ನೀಡಬೇಕು. ಅಲ್ಲದೇ ನ್ಯಾಯ ನೀಡದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಆಗ್ರಹಿಸಲಾಗಿದೆ. ಕಳೆದ ಬಾರಿ ನವರಾತ್ರಿ ಹೊತ್ತಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಇದೇ ವಿವಾದ ಭುಗಿಲೆದ್ದಿತ್ತು. ಆದರೆ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿತ್ತು. ಇದೀಗ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲೂ ಹೀಗೆ ಆಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಮುಸ್ಲಿಂ ವ್ಯಾಪಾರಿಗಳು ಆಗ್ರಹಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications