ಕರಾವಳಿ ಅಲೆ ಸಂಪಾದಕ ಸೀತಾರಾಂಗೆ 30 ತಿಂಗಳ ಜೈಲುವಾಸ
ಮಂಗಳೂರು, ಡಿ.5: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಲೇಖನಗಳನ್ನು ಪ್ರಕಟಿಸಿದ ಆರೋಪ ಹೊತ್ತಿರುವ ಕರಾವಳಿ ಅಲೆ ಸಂಪಾದಕ, ಮಾಲೀಕ ಬಿ.ವಿ ಸೀತಾರಾಂ ಅವರಿಗೆ ಜೆಎಂಎಫ್ ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಅವಹೇಳನಕಾರಿ ಲೇಖನ ಪ್ರಕಟಿಸಿದ ಬಿ.ವಿ ಸೀತಾರಾಂ ಅವರಿಗೆ 30 ತಿಂಗಳ ಜೈಲುವಾಸ ಹಾಗೂ ಸಂಜೆ ಪತ್ರಿಕೆ ಕರಾವಳಿಯ ಮೂವರು ಸಿಬ್ಬಂದಿಗೆ 15,000 ರು ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.
ಕರಾವಳಿ ಅಲೆ ಪತ್ರಿಕೆಯಲ್ಲಿ ಅನಾಮಧೇಯನೊಬ್ಬನ ಹೆಸರಿನಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀಕ್ಷೇತ್ರದ ವಿರುದ್ಧ ಸರಣಿ ಲೇಖನಗಳನ್ನು ಪ್ರಕಟಿಸಲಾಗಿತ್ತು. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸದಂತೆ ಸಿವಿಎಲ್ ನ್ಯಾಯಾಲಯದ ಆದೇಶವಿದ್ದರೂ ಕರಾವಳಿ ಅಲೆಯಲ್ಲಿ ಲೇಖನಗಳು ಪ್ರಕಟಗೊಂಡಿತ್ತು.

ಇದನ್ನು ಪ್ರಶ್ನಿಸಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕರಾವಳಿ ಅಲೆ ವಿರುದ್ಧ ಬಿ. ವರ್ಧಮಾನ್ ಜೈನ್ ಮೂಲಕ ಐದು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು. ಲೇಖನಗಳು ಸತ್ಯಕ್ಕೆ ದೂರವಾಗಿದ್ದು, ಈ ಅಂಕಣ ಪ್ರಕಟಿಸಿದ ಸಂಪಾದಕ, ಮಾಲೀಕ, ಪ್ರಕಾಶಕರ ಮೇಲೆ ಕ್ರಮ ಜರುಗಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.
ಎಸ್ ಡಿಎಂ ಕಾನೂನು ಕಾಲೇಜಿನ ಬಿ ವರ್ಧಮಾನ್ ಜೈನ್, ಡಾ. ಬಿಕೆ ರವೀಂದ್ರ, ಆದರ್ಶ ಇನ್ಸ್ಟಿಟ್ಯೂಟ್ ನ ಸಂಚಾಲಕ ಬಾಲಕೃಷ್ಣ ಭಂಡಾರಿ ಅವರನ್ನು ಈ ಪ್ರಕರಣದಲ್ಲಿ ಸಾಕ್ಷಿಗಳಾಗಿ ಪರಿಗಣಿಸಲಾಗಿತ್ತು. ವಿಚಾರಣೆ ವೇಳೆ ಕರಾವಳಿ ಅಲೆಯಲ್ಲಿ ಅನಾಮಧೇಯ ಹೆಸರಿನಲ್ಲಿ ಪ್ರಕಟಗೊಂಡಿರುವ ಲೇಖನಗಳೆಲ್ಲವೂ ಶ್ರೀಕ್ಷೇತ್ರ ಧರ್ಮಸ್ಥಳದ ಮಾನಹಾನಿ ಮಾಡಲು ಪ್ರಕಟಿಸಲಾಗಿದೆ ಎಂಬುದು ಸಾಬೀತಾಗಿತ್ತು.
ಮೂರನೇ ಜೆಎಂಎಫ್ ಸಿ ಕೋರ್ಟ್ ಜಡ್ಜ್ ಉಂಡಿ ಮಂಜುಳಾ ಶಿವಪ್ಪ ಅವರು ಐದು ಪ್ರಕರಣದ ವಿಚಾರಣೆ ಬಳಿಕೆ ಕರಾವಳಿ ಅಲೆ ಸಂಪಾದಕ ಬಿ.ವಿ ಸೀತಾರಾಂ ಅವರಿಗೆ 30 ತಿಂಗಳ ಜೈಲುವಾಸ ಶಿಕ್ಷೆ ವಿಧಿಸಿದ್ದಾರೆ. ದಂಡವನ್ನು ಕಟ್ಟಲು ಸಾಧ್ಯವಾಗದಿದ್ದರೆ ಒಂದು ವರ್ಷ ಅಧಿಕ ಅವಧಿ ಜೈಲುವಾಸ ಅನುಭವಿಸಬೇಕಾಗುತ್ತದೆ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರ ವಕೀಲರಾದ ಪಿಪಿ ಹೆಗ್ಡೆ ಹಾಗು ರಾಜೇಶ್ ಅಂತಾಡಿ ಹೇಳಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications