ಟೋಪಿ ಬೇಕೇ ಟೋಪಿ ಹಾಳೆಯ ಟೋಪಿ
ಉಜಿರೆ, ನವೆಂಬರ್ 19: ಸುತ್ತಲೂ ಜನಸಂದಣಿ. ನೆಲದಲ್ಲಿ ಕೂತು ಹಾಳೆಟೋಪಿ [ಮುಟ್ಟಾಲೆ] ಯನ್ನು ಹೆಣೆಯುತ್ತಾ ಕೂತ ಹಿರಿ ವಯಸ್ಸಿನ ವ್ಯಕ್ತಿ. ಅದರ ಕಡೆಗೆ ಕುತೂಹಲದ ಕಣ್ಣುಗಳನ್ನು ನೆಟ್ಟು ಆ ಬಗ್ಗೆ ವಿಚಾರಿಸುತ್ತಿರುವವರು. ಅವರಲ್ಲೊಂದಷ್ಟು ಜನ ಕೊಳ್ಳುವ ಇರಾದೆ ವ್ಯಕ್ತಪಡಿಸುವವರು
ಈ ಚಿತ್ರಣಕಂಡು ಬಂದದ್ದು ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತು ಪ್ರದರ್ಶನದಲ್ಲಿ. ಅಡಿಕೆ ಹಾಳೆಯನ್ನು ಕಚ್ಚಾವಸ್ತುವನ್ನಾಗಿ ಬಳಸಿ ರೂಪುಗೊಂಡ ಹಾಳೆ ಟೋಪಿಗಳು ಅಲ್ಲಿದ್ದವು. ಕೃಷಿ ಕೆಲಸದಲ್ಲಿ ನಿರತರಾದವರು, ಶ್ರಮವಹಿಸಿ ದುಡಿಯುವವರು ತಮ್ಮ ದುಡಿಮೆಯ ಅವಧಿಯಲ್ಲಿ ಹಾಕಿಕೊಳ್ಳಬಹುದಾದ ಟೋಪಿಗಳಿವು. ಇವುಗಳನ್ನು ಮಾರಾಟಕ್ಕಿಟ್ಟು ಕುಳಿತಿದ್ದವರು ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಶಿರ್ಲಾಲು ನಿವಾಸಿಯಾಗಿರುವ ಅರವತ್ತು ವರ್ಷದ ಬಾಬು ನಲಿಕೆ.
ಟೋಪಿಯನ್ನು ಸಿದ್ಧಪಡಿಸಿ ಅದರಿಂದಲೇ ಆದಾಯ ತಂದುಕೊಳ್ಳುವ ಅವರ ಉತ್ಸಾಹ ಯುವಕರನ್ನೂ ನಾಚಿಸುವಂತಿದೆ. ಸುಮಾರು 6 ವರ್ಷಗಳಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಯನ್ನು ಮಾರುತ್ತಾ ಬಂದಿದ್ದಾರೆ.
ಸ್ವಂತವಾಗಿ ಅವರೇ ಈ ಹಾಳೆಟೋಪಿ ಸಿದ್ಧಪಡಿಸುತ್ತಾರೆ. ಲಕ್ಷದೀಪೋತ್ಸವದ ಕಾರಣಕ್ಕಾಗಿ 300ಕ್ಕೂ ಹೆಚ್ಚಿನ ಹಾಳೆ ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಸಿದ್ಧವಾದವುಗಳನ್ನು ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮಳಿಗೆಯಲ್ಲಿ ತಂದು ಮಾರುತ್ತಾರೆ.
ಅಡಿಕೆ ಹಾಳೆಯಲ್ಲಿ ತಯಾರು ಮಾಡುವ ಅಡಿಕೆ ಹಾಳೆಯ ಕಚ್ಚಾವಸ್ತುಗಳ ಅಲಭ್ಯತೆಯಿಂದಾಗಿ ಹಾಳೆ ಟೋಪಿಯ ತಯಾರಿಕೆ ಮತ್ತು ಮಾರಾಟದ ಪ್ರಮಾಣವೂ ಕಡಿಮೆಯಾಗಿದೆ. ಆದರೇನಂತೆ. ಟೋಪಿ ಸಿದ್ಧಪಡಿಸುವ ಉತ್ಸಾಹವನ್ನಂತೂ ಬಾಬು ನಲಿಕೆಯವರು ಕಳೆದುಕೊಂಡಿಲ್ಲ. ನಗುನಗುತ್ತಲೇ ಈ ವ್ಯಾಪಾರ ವಹಿವಾಟಿನೊಂದಿಗೆ ಗುರುತಿಸಿಕೊಂಡಿದ್ದಾರೆ.

2 ಗಾತ್ರದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ
ಈ ಹಾಳೆಟೋಪಿಯನ್ನು 2 ಗಾತ್ರದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ. ಒಂದುಗೇಣುವಿನ ಸಣ್ಣ ಪ್ರಮಾಣದಟೋಪಿಯು 50 ರೂ ಹಾಗೂ ಒಂದುವರೆಗೇಣುವಿನ ದೊಡ್ಡ ಪ್ರಮಾಣದಟೋಪಿಯು 60 ರೂ ಗಳಿಗೆ ಮಾರಾಟವಾಗುತ್ತಿದೆ.

ಭೂತಕಟ್ಟುವ ಕಾರ್ಯಕ್ಕೂ ಸೈ
ಹಾಳೆಟೋಪಿ ಸಿದ್ಧಪಡಿಸುವಿಕೆ ಮಾತ್ರವಲ್ಲದೆ ಭೂತಕಟ್ಟುವ ಕಾರ್ಯದಲ್ಲೂ ಇವರು ತೊಡಗಿಕೊಂಡಿದ್ದಾರೆ. ತಮ್ಮ ಬಿಡುವಿನ ವೇಳೆಯಲ್ಲಿ ದಿನಕ್ಕೆ ಸುಮಾರು 20 ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಒಂದು ಟೋಪಿ ಸಿದ್ಧಪಡಿಸುವ ಹಂತ ವಿಶೇಷತೆಯನ್ನು ಹೊಂದಿದೆ. ಅಡಿಕೆ ಹಾಳೆಯನ್ನು ಸಂಗ್ರಹಿಸಿ ಅದನ್ನು ನೀರಿನಲ್ಲಿ ನೆನೆ ಹಾಕಿಡುತ್ತಾರೆ. ಬಳಿಕ ಆಯಾ ಅಳತೆಗಳಿಗೆ ಕತ್ತರಿಸಿ ಹದವನ್ನು ಮಾಡಲಾಗುತ್ತದೆ.

ಹಾಳೆ ಟೋಪಿ ಸಿದ್ಧಪಡಿಸುವಿಕೆ
ಅಳದಂಗಡಿ ಸುತ್ತಮುತ್ತಲಿನ ಅಡಿಕೆ ತೋಟದಿಂದ ಖರೀದಿಸುವ ಒಂದು ಹಾಳೆಯ ಬೆಲೆ 1.5 ರೂಪಾಯಿ. ನಷ್ಟವನ್ನು ಉಂಟುಮಾಡದೇ ಕೇವಲ ಲಾಭವನ್ನು ನೀಡುವ ಈ ಹಾಳೆ ಟೋಪಿ ಸಿದ್ಧಪಡಿಸುವಿಕೆಯು ಗ್ರಾಮೀಣ ಸೊಗಡಿಗೆ ನಿದರ್ಶನವಾಗುತ್ತದೆ.

ವರ್ಷದಿಂದ ವರ್ಷ ಕ್ಕೆ ಗ್ರಾಹಕರ ಸಂಖ್ಯೆ ಹೆಚ್ಚಳ
ವರ್ಷದಿಂದ ವರ್ಷ ಕ್ಕೆ ಗ್ರಾಹಕರ ಸಂಖ್ಯೆಯು ಹೆಚ್ಚುತ್ತಿದ್ದು, ಹಾಳೆಟೋಪಿಯ ಬೇಡಿಕೆ ಹೆಚ್ಚಿರುವುದು ಸಂತೋಷದ ವಿಷಯವಾಗಿದೆ. ನವಜೀವನ ಸಂಸ್ಥೆ ಹಾಗೂ ಸ್ವಸಹಾಯ ಸಂಘದ ವತಿಯಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಗಳನ್ನು ಮಾರಾಟ ಮಾಡಲಾಗುತ್ತದೆ. ಆಧುನಿಕ ದಿನಗಳಲ್ಲಿ ಬಣ್ಣ-ಬಣ್ಣದ ಟೋಪಿಗಳ ನಡುವೆ ಇದು ಗ್ರಾಮೀಣ ಸೊಗಡನ್ನು ನೆನಪಿಸುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications