ಟೋಪಿ ಬೇಕೇ ಟೋಪಿ ಹಾಳೆಯ ಟೋಪಿ
ಉಜಿರೆ, ನವೆಂಬರ್ 19: ಸುತ್ತಲೂ ಜನಸಂದಣಿ. ನೆಲದಲ್ಲಿ ಕೂತು ಹಾಳೆಟೋಪಿ [ಮುಟ್ಟಾಲೆ] ಯನ್ನು ಹೆಣೆಯುತ್ತಾ ಕೂತ ಹಿರಿ ವಯಸ್ಸಿನ ವ್ಯಕ್ತಿ. ಅದರ ಕಡೆಗೆ ಕುತೂಹಲದ ಕಣ್ಣುಗಳನ್ನು ನೆಟ್ಟು ಆ ಬಗ್ಗೆ ವಿಚಾರಿಸುತ್ತಿರುವವರು. ಅವರಲ್ಲೊಂದಷ್ಟು ಜನ ಕೊಳ್ಳುವ ಇರಾದೆ ವ್ಯಕ್ತಪಡಿಸುವವರು
ಈ ಚಿತ್ರಣಕಂಡು ಬಂದದ್ದು ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತು ಪ್ರದರ್ಶನದಲ್ಲಿ. ಅಡಿಕೆ ಹಾಳೆಯನ್ನು ಕಚ್ಚಾವಸ್ತುವನ್ನಾಗಿ ಬಳಸಿ ರೂಪುಗೊಂಡ ಹಾಳೆ ಟೋಪಿಗಳು ಅಲ್ಲಿದ್ದವು. ಕೃಷಿ ಕೆಲಸದಲ್ಲಿ ನಿರತರಾದವರು, ಶ್ರಮವಹಿಸಿ ದುಡಿಯುವವರು ತಮ್ಮ ದುಡಿಮೆಯ ಅವಧಿಯಲ್ಲಿ ಹಾಕಿಕೊಳ್ಳಬಹುದಾದ ಟೋಪಿಗಳಿವು. ಇವುಗಳನ್ನು ಮಾರಾಟಕ್ಕಿಟ್ಟು ಕುಳಿತಿದ್ದವರು ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಶಿರ್ಲಾಲು ನಿವಾಸಿಯಾಗಿರುವ ಅರವತ್ತು ವರ್ಷದ ಬಾಬು ನಲಿಕೆ.
ಟೋಪಿಯನ್ನು ಸಿದ್ಧಪಡಿಸಿ ಅದರಿಂದಲೇ ಆದಾಯ ತಂದುಕೊಳ್ಳುವ ಅವರ ಉತ್ಸಾಹ ಯುವಕರನ್ನೂ ನಾಚಿಸುವಂತಿದೆ. ಸುಮಾರು 6 ವರ್ಷಗಳಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಯನ್ನು ಮಾರುತ್ತಾ ಬಂದಿದ್ದಾರೆ.
ಸ್ವಂತವಾಗಿ ಅವರೇ ಈ ಹಾಳೆಟೋಪಿ ಸಿದ್ಧಪಡಿಸುತ್ತಾರೆ. ಲಕ್ಷದೀಪೋತ್ಸವದ ಕಾರಣಕ್ಕಾಗಿ 300ಕ್ಕೂ ಹೆಚ್ಚಿನ ಹಾಳೆ ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಸಿದ್ಧವಾದವುಗಳನ್ನು ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮಳಿಗೆಯಲ್ಲಿ ತಂದು ಮಾರುತ್ತಾರೆ.
ಅಡಿಕೆ ಹಾಳೆಯಲ್ಲಿ ತಯಾರು ಮಾಡುವ ಅಡಿಕೆ ಹಾಳೆಯ ಕಚ್ಚಾವಸ್ತುಗಳ ಅಲಭ್ಯತೆಯಿಂದಾಗಿ ಹಾಳೆ ಟೋಪಿಯ ತಯಾರಿಕೆ ಮತ್ತು ಮಾರಾಟದ ಪ್ರಮಾಣವೂ ಕಡಿಮೆಯಾಗಿದೆ. ಆದರೇನಂತೆ. ಟೋಪಿ ಸಿದ್ಧಪಡಿಸುವ ಉತ್ಸಾಹವನ್ನಂತೂ ಬಾಬು ನಲಿಕೆಯವರು ಕಳೆದುಕೊಂಡಿಲ್ಲ. ನಗುನಗುತ್ತಲೇ ಈ ವ್ಯಾಪಾರ ವಹಿವಾಟಿನೊಂದಿಗೆ ಗುರುತಿಸಿಕೊಂಡಿದ್ದಾರೆ.

2 ಗಾತ್ರದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ
ಈ ಹಾಳೆಟೋಪಿಯನ್ನು 2 ಗಾತ್ರದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ. ಒಂದುಗೇಣುವಿನ ಸಣ್ಣ ಪ್ರಮಾಣದಟೋಪಿಯು 50 ರೂ ಹಾಗೂ ಒಂದುವರೆಗೇಣುವಿನ ದೊಡ್ಡ ಪ್ರಮಾಣದಟೋಪಿಯು 60 ರೂ ಗಳಿಗೆ ಮಾರಾಟವಾಗುತ್ತಿದೆ.

ಭೂತಕಟ್ಟುವ ಕಾರ್ಯಕ್ಕೂ ಸೈ
ಹಾಳೆಟೋಪಿ ಸಿದ್ಧಪಡಿಸುವಿಕೆ ಮಾತ್ರವಲ್ಲದೆ ಭೂತಕಟ್ಟುವ ಕಾರ್ಯದಲ್ಲೂ ಇವರು ತೊಡಗಿಕೊಂಡಿದ್ದಾರೆ. ತಮ್ಮ ಬಿಡುವಿನ ವೇಳೆಯಲ್ಲಿ ದಿನಕ್ಕೆ ಸುಮಾರು 20 ಟೋಪಿಗಳನ್ನು ಸಿದ್ಧಪಡಿಸುತ್ತಾರೆ. ಒಂದು ಟೋಪಿ ಸಿದ್ಧಪಡಿಸುವ ಹಂತ ವಿಶೇಷತೆಯನ್ನು ಹೊಂದಿದೆ. ಅಡಿಕೆ ಹಾಳೆಯನ್ನು ಸಂಗ್ರಹಿಸಿ ಅದನ್ನು ನೀರಿನಲ್ಲಿ ನೆನೆ ಹಾಕಿಡುತ್ತಾರೆ. ಬಳಿಕ ಆಯಾ ಅಳತೆಗಳಿಗೆ ಕತ್ತರಿಸಿ ಹದವನ್ನು ಮಾಡಲಾಗುತ್ತದೆ.

ಹಾಳೆ ಟೋಪಿ ಸಿದ್ಧಪಡಿಸುವಿಕೆ
ಅಳದಂಗಡಿ ಸುತ್ತಮುತ್ತಲಿನ ಅಡಿಕೆ ತೋಟದಿಂದ ಖರೀದಿಸುವ ಒಂದು ಹಾಳೆಯ ಬೆಲೆ 1.5 ರೂಪಾಯಿ. ನಷ್ಟವನ್ನು ಉಂಟುಮಾಡದೇ ಕೇವಲ ಲಾಭವನ್ನು ನೀಡುವ ಈ ಹಾಳೆ ಟೋಪಿ ಸಿದ್ಧಪಡಿಸುವಿಕೆಯು ಗ್ರಾಮೀಣ ಸೊಗಡಿಗೆ ನಿದರ್ಶನವಾಗುತ್ತದೆ.

ವರ್ಷದಿಂದ ವರ್ಷ ಕ್ಕೆ ಗ್ರಾಹಕರ ಸಂಖ್ಯೆ ಹೆಚ್ಚಳ
ವರ್ಷದಿಂದ ವರ್ಷ ಕ್ಕೆ ಗ್ರಾಹಕರ ಸಂಖ್ಯೆಯು ಹೆಚ್ಚುತ್ತಿದ್ದು, ಹಾಳೆಟೋಪಿಯ ಬೇಡಿಕೆ ಹೆಚ್ಚಿರುವುದು ಸಂತೋಷದ ವಿಷಯವಾಗಿದೆ. ನವಜೀವನ ಸಂಸ್ಥೆ ಹಾಗೂ ಸ್ವಸಹಾಯ ಸಂಘದ ವತಿಯಿಂದ ಲಕ್ಷದೀಪೋತ್ಸವದಲ್ಲಿ ಹಾಳೆಟೋಪಿಗಳನ್ನು ಮಾರಾಟ ಮಾಡಲಾಗುತ್ತದೆ. ಆಧುನಿಕ ದಿನಗಳಲ್ಲಿ ಬಣ್ಣ-ಬಣ್ಣದ ಟೋಪಿಗಳ ನಡುವೆ ಇದು ಗ್ರಾಮೀಣ ಸೊಗಡನ್ನು ನೆನಪಿಸುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications