Laksha Deepotsava: ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ
ಮಂಗಳೂರು, ಡಿಸೆಂಬರ್ 14: ದಕ್ಷಿಣ ಭಾರತದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಐದು ದಿನಗಳ ಕಾಲ ನಡೆಯುವ ಲಕ್ಷ ದೀಪೋತ್ಸವಕ್ಕೆ ತೆರೆ ಬಿದ್ದಿದೆ. ದೀಪೋತ್ಸವದ ಸಂಭ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ. ಕೊನೆಯ ದಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸ್ವರ್ಗವೇ ಧರೆಗಿಳಿದು ಬಂದಂತೆ ಸಿಂಗಾರಗೊಂಡು ಲಕ್ಷಾಂತರ ಭಕ್ತರ ಸಮಾಗಮಕ್ಕೆ ಸಾಕ್ಷಿಯಾಯಿತು.
ಕಾರ್ತಿಕ ಮಾಸದ ಲಕ್ಷ ದೀಪದ ಸಂಭ್ರಮ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇಳೈಸಿದೆ. ಲಕ್ಷ ದೀಪೋತ್ಸವದ ಹಿನ್ನಲೆಯಲ್ಲಿ ಧರ್ಮಸ್ಥಳ ಕ್ಷೇತ್ರ ದೀಪಾಲಂಕಾರದಿಂದ ಕಂಗೊಳಿಸಿದೆ. ಧರ್ಮಸ್ಥಳದಲ್ಲಿ ಕೊನೆಯ ದಿನ ಭಕ್ತ ಸಾಗರವೇ ಹರಿದುಬಂದಿದ್ದು ಜನ ರಾತ್ರಿ ಇಡೀ ಧರ್ಮಸ್ಥಳದಲ್ಲೇ ಕಳೆದು ಲಕ್ಷ ದೀಪೋತ್ಸವ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಕಳೆದ ಐದು ದಿನಗಳಿಂದ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಲಕ್ಷ ದೀಪೋತ್ಸವ ನಡೆದಿದೆ. ಡಿಸೆಂಬರ್ 13 ಬುಧವಾರ ಭಗವಾನ್ ಶ್ರೀಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ನಡೆದ ಸಮವಸರಣ ಪೂಜೆಯೊಂದಿಗೆ ಅಪಾರ ಭಕ್ತರ ಸಮಾಗಮದಲ್ಲಿ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ ಬಿದ್ದಿದೆ.
ದೀಪೋತ್ಸವ ಕೊನೆಯ ದಿನ ಹಿನ್ನೆಲೆ ದೇಗುಲದ ಮುಂಭಾಗವನ್ನು ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಸುಮಾರು ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಹೂವಿನ ಸಿಂಗಾರ ಮಾಡಲಾಗಿದ್ದು, ಮೂವತ್ತಕ್ಕೂ ಅಧಿಕ ಕಾರ್ಮಿಕರು ದೇವಸ್ಥಾನದ ಮುಂಭಾಗ ಅತ್ಯಾಕರ್ಷಕವಾಗಿ ಅಲಂಕಾರ ಮಾಡಿದ್ದಾರೆ. ವಿಶೇಷವಾಗಿ ವಿದೇಶಿ ಹೂವುಗಳಿಂದ ಈ ಅಲಂಕಾರ ಮಾಡಲಾಗಿದ್ದು, ನಂದಿ ವಿಗ್ರಹ, ಡಮರುಗ, ತ್ರಿಶೂಲವನ್ನು ಹೂವಿನಿಂದಲೇ ನಿರ್ಮಿಸಿದ್ದು ವಿಶೇಷವಾಗಿತ್ತು. ಬೆಂಗಳೂರು ಮೂಲದ ಭಕ್ತರ ತಂಡ ಪ್ರತಿವರ್ಷ ಈ ಅಲಂಕಾರ ಸೇವೆಯನ್ನು ಮಾಡುತ್ತದೆ.

ಐದು ದಿನಗಳ ಕಾಲ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಕರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿ ಮಾರುಕಟ್ಟೆ ಉತ್ಸವ, ಗೌರಿ ಮಾರುಕಟ್ಟೆ ಉತ್ಸವದ ಜೊತೆಗೆ ಸರ್ವ ಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ ಹೀಗೆ ವಿವಿಧ ಸಮ್ಮೇಳನಗಳು ನಡೆದಿದೆ. ದೇವಸ್ಥಾನ, ಅನ್ನ ಛತ್ರ ರಾಜಬೀದಿಗಳು ದೀಪಾಲಂಕಾರದಿಂದ ಕಂಗೊಳಿಸಿದೆ. ರಾಜ್ಯದ ವಿವಿಧ ಭಾಗದ ಕಲಾತಂಡಗಳು ಕ್ಷೇತ್ರಕ್ಕೆ ಆಗಮಿಸಿ ರಾತ್ರಿ ಇಡೀ ಸೇವೆ ನೀಡುವುದು ಲಕ್ಷ ದೀಪೋತ್ಸವದ ವಿಶೇಷವಾಗಿದ್ದು ಈ ಬಾರಿಯೂ ಹಲವು ತಂಡಗಳು ಕ್ಷೇತ್ರಕ್ಕೆ ಆಗಮಿಸಿದೆ.
ಒಟ್ಟಿನಲ್ಲಿ ಐದು ದಿನಗಳ ಕಾಲ ನಡೆದ ಲಕ್ಷ ದೀಪದ ಸಂಭ್ರಮದಲ್ಲಿ ಕರಾವಳಿ ಮಾತ್ರವಲ್ಲದೇ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಅಲ್ಲದೇ ಧರ್ಮಸ್ಥಳದ ದೀಪಾಲಂಕಾರ ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications