ಲಕ್ಷದೀಪೋತ್ಸವಕ್ಕಾಗಿ ಕೆ.ಎಸ್.ಆರ್.ಟಿ.ಸಿ ಹೆಚ್ಚುವರಿ ಬಸ್ ಸೌಲಭ್ಯ
ಬೆಂಗಳೂರು, ನವೆಂಬರ್ 25: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಮೊದಲ ದಿನ ಭಕ್ತ ಜನರ ಉತ್ಸಾಹವನ್ನು ಸಂಕೇತಿಸಿತ್ತು. ಭಕ್ತ ಜನರ ಪ್ರಯಾಣ ಸೌಕರ್ಯದ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಧರ್ಮಸ್ಥಳ ಡಿಪೋ ವಿಶೇಷ ಮುತುವರ್ಜಿವಹಿಸಿದ್ದು ವಿಶೇಷ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಡಿಪೋ ಎಂದಿನ 165 ಬಸ್ಸಿನ ವ್ಯವಸ್ಥೆಯನ್ನು ಹೊರತುಪಡಿಸಿ ಹೆಚ್ಚುವರಿಯಾಗಿ 30 ವಿಶೇಷ ಸಂಚಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿಕೊಟ್ಟಿತ್ತು. ಭಕ್ತ ಜನರಲ್ಲಿ ಹರುಷ ಮೂಡಿಸಿದ್ದು, ಶ್ರೀ ಕ್ಷೇತ್ರದ ಉತ್ಸವಕ್ಕೆ ಮತ್ತಷ್ಟು ಪೂರಕವಾಗಿದೆ.
ಶಿರಾಡಿಘಾಟ್ಗೆ ಸಂಪರ್ಕ ಕಲ್ಪಿಸಲು ಡಿಪೋದಿಂದ 15 ಹೆಚ್ಚುವರಿ ವಿಶೇಷ ಬಸ್ಸುಗಳ ಸಂಚಾರವಿತ್ತು. ಇನ್ನುಳಿದ 15 ಬಸ್ಸುಗಳು ಸ್ಥಳೀಯರ ಅನುಕೂಲಕ್ಕೆ ಮೀಸಲಾಗಿದ್ದವು.

ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಿಬ್ಬಂದಿ ವರ್ಗದ ಮುಖ್ಯಸ್ಥ ಜನಾರ್ದನ ಅವರು ಈ ಕುರಿತು ವಿವರಗಳನ್ನು ನೀಡಿದರು. "ಜನ ಸಂದಣಿಯ ಆಧಾರದ ಮೇಲೆ ಅಂದಾಜಿಸಿ ಬಸ್ಸಿನ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಜೆ 7 ಗಂಟೆಯ ನಂತರ ಸಾರ್ವಜನಿಕ ಪ್ರಯಾಣದ ಸಂಖ್ಯೆ ಕಡಿಮೆಯಾಗುವುದರಿಂದ ಅಗತ್ಯತೆಗೆ ತಕ್ಕಷ್ಟು ಬಸ್ಸುಗಳನ್ನು ಒದಗಿಸುವುದರಲ್ಲಿ ಪ್ರಯತ್ನ ಮಾಡುತ್ತೇವೆ" ಎಂದು ಹೇಳಿದರು.
ಒಂದು ಬಸ್ಸಿಗೆ ಒಮ್ಮೆಯ ಪ್ರಯಾಣಕ್ಕೆ ಕನಿಷ್ಟ 50 ಸೀಟುಗಳು ಭರ್ತಿಯಾಗಬೇಕು. 1 ಕಿ.ಮೀ.ಗೆ ಸುಮಾರು 38 ರೂ ವೆಚ್ಚವಾಗುವುದರಿಂದ ಎರಡು ಮೂರು ಪ್ರಯಾಣಿಕರಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗುವುದಿಲ್ಲ ಎಂದರು.

ಉತ್ಸವದ ಎಲ್ಲಾ ದಿನಗಳಲ್ಲಿ ದಿಡುಪೆ, ಬೆಳಾಲು, ಶಿಶಿಲ, ಶಿಬಾಜೆ, ಪಟ್ರಮೆ, ಕೊಕ್ಕಡ, ನೆರಿಯ, ಗಂಡಿಬಾಗಿಲು ಮತ್ತು ಪುದುವೆಟ್ಟು ಹೀಗೆ ಅನೇಕ ಸ್ಥಳೀಯ ಗ್ರಾಮಗಳಿಗೆ ಎಂದಿನಂತೆ ನಿಗದಿತ ಸಮಯಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಚಾರ್ಮಾಡಿ ಘಾಟ್ ಬಂದ್ ಆಗಿರುವ ಕಾರಣ ಎಕ್ಸ್ ಪ್ರೆಸ್ ಬಸ್ಸುಗಳ ಸಂಚಾರ ಇಲ್ಲದಿರುವುದರಿಂದ ಚಾರ್ಮಾಡಿಯವರೆಗೂ ಸಾರ್ವಜನಿಕರಿಗೆ ಸ್ಥಳೀಯ ಬಸ್ಸಿನ ವ್ಯವಸ್ಥೆ ಇದೆ. ಶಿರಾಡಿ ಘಾಟ್ನ ಮೂಲಕ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳ ಸಂಚಾರ ವ್ಯವಸ್ಥೆಗೊಳಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications