ಭತ್ತದ ತೋರಣ: ಗ್ರಾಮೀಣ ದೇಶಿ ಕರಕುಶಲ ಕಲೆಯ ಸೊಬಗು
ಉಜಿರೆ: ಪ್ಲಾಸ್ಟಿಕ್ನ ಬಣ್ಣ ಬಣ್ಣದ ತೋರಣಗಳ ನಡುವೆ ದೇಶಿ ಉತ್ಪನ್ನಗಳು ಕೂಡ ರಾರಾಜಿಸುತ್ತಿವೆ. ಪ್ಲಾಸ್ಟಿಕ್ನ್ನು ಕೊಂಚ ಮಟ್ಟಿಗೆ ದೂರ ಸರಿಸಿ ನೈಸರ್ಗಿಕವಾದ ವಸ್ತುಗಳು ಅವುಗಳ ಸ್ಥಾನವನ್ನು ಪಡೆದುಕೊಳ್ಳುತ್ತಿವೆ.
ಅದರಲ್ಲಿ ಮಾವಿನ ಎಲೆ, ಹೂವಿನ ತೋರಣವನ್ನು ಕೂಡ ಮನೆ ಬಾಗಿಲಿಗೆ ಹಾಕಿ ಆಲಂಕಾರಿಸುತ್ತಾರೆ. ಆದರೆ ಇಲ್ಲಿ ಭತ್ತದ ತೋರಣ ಕೂಡ ಈ ಸ್ಥಾನವನ್ನು ಪಡೆದುಕೊಂಡಿದೆ.
ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಪ್ಲಾಸ್ಟಿಕ್ ತೋರಣಗಳ ನಡುವೆ ಭತ್ತದತೋರಣ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಲಕ್ಷ ದೀಪೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿತ್ತು.
ಮನೆಯ ಅಲಂಕಾರಕ್ಕೆ ಪ್ರತಿಯೊಬ್ಬರು ಕೂಡ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ. ಮನೆ ಸಣ್ಣದಿರಲಿ, ದೊಡ್ಡದಿರಲಿ ಪ್ರತಿಕೋಣೆಯ ಬಾಗಿಲಿಗೆ, ಗೋಡೆಗೆ ಈ ಅಲಂಕಾರವನ್ನು ಮಾಡಿ ಸುಂದರವಾಗಿ ಕಾಣುವ ಹಾಗೇ ಮಾಡುತ್ತಾರೆ. ಆದರೆ ಈ ಭತ್ತದ ತೋರಣವನ್ನು ಮನೆಯ ಬಾಗಿಲಿಗೆ ಮಾತ್ರವಲ್ಲದೇ ದೇವಸ್ಥಾನದ ಬಾಗಿಲಿಗೆ ಕೂಡ ಹಾಕಬಹುದು.

ಈ ಭತ್ತದ ತೋರಣವನ್ನು ಕಾರವಾರದಿಂದ ಮಾಡಿಸಿ ತರಲಾಗುತ್ತದೆ. ಅಲ್ಲದೇ ಈ ಪೈರನ್ನು ಬೆಳೆಯಲು ಯಾವುದೇ ರೀತಿಯ ಕೃತಕ ಔಷಧಗಳನ್ನು ಹಾಕದೇ ನೈಸರ್ಗಿಕ ಗೊಬ್ಬರಗಳನ್ನು ಹಾಕಿ ಬೆಳೆಸಲಾಗುತ್ತದೆ. ಇದು ಜಯ ಭತ್ತದ ಪೈರಿನಿಂದ ಈ ತೋರಣವನ್ನು ಮಾಡಲಾಗುತ್ತದೆ. ಈ ತೋರಣಕ್ಕೆ ಮುಡಿ, ಇಂಗ್ಲೀಷ್ ನಲ್ಲಿ ನೆಲ್ಲಿ ಎಂದು ಕೂಡ ಕರೆಯುತ್ತಾರೆ.
ಈ ತೋರಣದ ವಿಶೇಷತೆಯೆಂದರೆ 6ವರ್ಷಗಳವರೆಗೆ ಯಾವುದೇ ರೀತಿಯಲ್ಲಿ ಹಾಳಾಗುವುದಿಲ್ಲ. ಅಲ್ಲದೇ ಕೃತಕ ಬಣ್ಣ, ಹಾಳಗದ ಹಾಗೇ ಯಾವುದೇ ರಸಾಯನಿಕಗಳನ್ನು ಸಿಂಪಡಿಸುವುದಿಲ್ಲ.
ನೈಸರ್ಗಿಕವಾಗಿಯೇ ತೋರಣವನ್ನು ಮಾಡಲಾಗಿದೆ. ನಮ್ಮ ಮನೆಯ ಬಾಗಿಲು ಯಾವ ರೀತಿಯ ಅಳತೆಯನ್ನು ಹೊಂದಿದೆ ಆ ರೀತಿಯ ತೋರಣಗಳು ಇವೆ. ಇಲ್ಲದಿದ್ದರೆ ಮೊದಲೇ ಆರ್ಡರ್ ಕೊಟ್ಟು ಮಾಡಿಸಿಕೊಳ್ಳಬಹುದು.

ಲಕ್ಷದೀಪೋತ್ಸವಕ್ಕೆ ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವ್ಯಾಪಾರಕ್ಕೆ ಬಂದಿದ್ದು, ಉತ್ತಮ ಮಟ್ಟದಲ್ಲಿ ಜನರಿಂದ ಪ್ರತಿಕ್ರಿಯೆ ದೊರಕಿದೆ, ಹಲವಾರು ಜನ ಖರೀದಿ ಕೂಡ ಮಾಡಿದ್ದರೆ. ಇನ್ನಷ್ಟು ಜನ ಆರ್ಡರ್ ಮಾಡಿದ್ದಾರೆ. ಈ ತೋರಣ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೆಚ್ಚಾಗಿ ಮಾರಾಟವಾಗುತ್ತದೆ. ಅಲ್ಲದೇ ಅಮೆಜಾನ್ ಆನ್ಲೈನ್ ಮೂಲಕವು ಕೂಡ ಖರೀದಿಸಬಹುದು ಎಂದು ಭತ್ತದ ತೋರಣ ವ್ಯಾಪಾರಿ ಹೇಳಿದರು.
ಇಂದಿನ ಆಧುನಿಕತೆಯ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ದೇಶಿ ಕರಕುಶಲ ಕಲೆಗಳು ಮತ್ತೇ ಜೀವಂತವಾಗುತ್ತಿವೆ. ಪ್ಲಾಸ್ಟಿಕ್ ವಸ್ತುಗಳ ನಡುವೆ ದೇಶಿ ಉತ್ಪನ್ನಗಳು ಪೈಪೋಟಿ ನಡೆಸುತ್ತವೆ. ಇಂತಹ ದೇಶಿ ಉತ್ಪನ್ನಗಳ ಬಳಕೆ ಅಧಿಕವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications