ಧರ್ಮಸ್ಥಳ ಶ್ರೀ ಬಾಹುಬಲಿಗೆ 2019 ಫೆಬ್ರವರಿಯಲ್ಲಿ 4 ನೇ ಮಹಾಮಜ್ಜನ
ಮಂಗಳೂರು, ಸೆಪ್ಟೆಂಬರ್ 11: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಬಾಹುಬಲಿ ಸ್ವಾಮಿಗೆ ಫೆಬ್ರವರಿಯಲ್ಲಿ ನಾಲ್ಕನೇ ಬಾರಿಗೆ ಮಹಾಮಜ್ಜನ ನಡೆಸಲು ತೀರ್ಮಾನಿಸಲಾಗಿದ್ದು, ಲೋಕ ಕಲ್ಯಾಣಾರ್ಥ 2019 ರ ಫೆಬ್ರವರಿಯಲ್ಲಿ ಮಹಾಮಜ್ಜನ ನಡೆಯಲಿದೆ.
ಈ ಕುರಿತು ಪೂರ್ವ ಸಿದ್ಧತೆಯ ಸಮಾಲೋಚನಾ ಸಭೆ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಲಾಗುತ್ತದೆ.
ಶ್ರವಣಬೆಳಗೊಳದಲ್ಲಿ ಚಾತುರ್ಮಾಸ ವ್ರತಾಚರಣೆಯಲ್ಲಿರುವ ವರ್ಧಮಾನ ಸಾಗರ್ ಜೀ ಮುನಿ ಮಹಾರಾಜರು ಹಾಗೂ ಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಮುಂದಿನ ಫೆಬ್ರವರಿಯಲ್ಲಿ ಸರಳವಾಗಿ ಮಹಾಮಸ್ತಕಾಭಿಷೇಕ ನಡೆಯಲಿದೆ.

ರಾಜ್ಯಮಟ್ಟದಲ್ಲಿ ಸರಳವಾಗಿ ಮಹಾಮಸ್ತಕಾಭಿಷೇಕ ನಡೆಸಲು ಉದ್ದೇಶಿಸಲಾಗಿದ್ದು, ಉತ್ತರ ಭಾರತದವರನ್ನೂ ಈ ಮಹಾಮಸ್ತಕಾಭಿಷೇಕಕ್ಕೆ ಆಮಂತ್ರಿಸಲಾಗುವುದು ಎಂದು ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಸಹ ಮಹಾಮಜ್ಜನಕ್ಕೆ ಆಹ್ವಾನಿಸಿರುವುದಾಗಿ ಅವರು ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಮೇಲೆ ನಿಂತಿರುವ ಶಾಂತ ಚಿತ್ತ ಭಗವಾನ್ ಬಾಹುಬಲಿಯ ಮೂರ್ತಿಯನ್ನು ಕೀರ್ತಿಶೇಷ ಡಿ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿ ಆಶಯದಂತೆ ಕಾರ್ಕಳದಲ್ಲಿ ಬಾಹುಬಲಿ ಮೂರ್ತಿಯ ಕೆತ್ತನೆ ಆರಂಭಿಸಲಾಗಿತ್ತು .
ಶಿಲ್ಪಿ ರೆಂಜಾಳ ಗೋಪಾಲ ಶೆಣೈ ಅವರ ಕೈಯಲ್ಲಿ ಮೂಡಿ ಬಂದಿದ್ದ ಈ ಬಾಹುಬಲಿ ಮೂರ್ತಿಯನ್ನು 1982 ರಲ್ಲಿ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರಿಂದ ಪ್ರತಿಷ್ಠಾಪಿಸಲಾಯಿತು.
39 ಅಡಿ ಎತ್ತರದ ಬಾಹುಬಲಿಗೆ 1994, 2007 ರಲ್ಲಿ ಮಹಾಮಸ್ತಕಾಭಿಷೇಕ ಕೈಗೊಳ್ಳಲಾಗಿತ್ತು . ಇದೀಗ 2019 ರಲ್ಲಿ 4 ನೇ ಬಾರಿಗೆ ಮಹಾ ಮಸ್ತಕಾಭಿಷೇಕ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಬಾಹುಬಲಿಗೆ ಪಾದಾಭಿಷೇಕ ನಡೆಯುತ್ತದೆ. ಆದರೆ ಪ್ರತಿ 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications