ಎನ್ ಎಂಪಿಟಿಯಲ್ಲಿ ತೈಲ ಸೋರಿಕೆ: ತಪ್ಪಿದ ಭಾರೀ ಅನಾಹುತ
ಮಂಗಳೂರು, ನವೆಂಬರ್.04: ಮಂಗಳೂರಿನ ಎನ್ಎಂಪಿಟಿ ಬಂದರಿನ ಒಳಗೆ ಕಂಟೇನರ್ ಹೊತ್ತ ನೌಕೆಯಲ್ಲಿ ಅವಘಡ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಎನ್ಎಂಪಿಟಿ ಒಳಗಿನ ಬರ್ತ್ ನಲ್ಲಿ ಈ ಘಟನೆ ನಡೆದಿದ್ದು, ನೌಕೆಯ ಡೀಸೆಲ್ ಟ್ಯಾಂಕ್ ಒಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆ ಆಗಿದೆ.
ಕಂಟೇನರ್ ಗಳನ್ನು ಹೊತ್ತ ನೌಕೆ 'ಎಕ್ಸ್ ಪ್ರೆಸ್ ಬ್ರಹ್ಮಪುತ್ರ'ವನ್ನು ನಿಲ್ಲಿಸುವ ವೇಳೆ ಈ ಅವಘಡ ಸಂಭವಿಸಿದೆ.
ಎನ್ಎಂಪಿಟಿ ಹೊರಗಿನ ಕಡಲಿನಲ್ಲಿ ಬಂದ ಟ್ಯಾಂಕರ್ ನೌಕೆಯನ್ನು ಟಗ್ ದೂಡಿ ಬರದಲ್ಲಿ ಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಟಗ್ ನ ಸುರಕ್ಷಾ ಟ್ಯೂಬ್ ಒಡೆದು ನೌಕೆಗೆ ಡಿಕ್ಕಿ ಹೊಡೆದು ತಳ್ಳಿಕೊಂಡು ಹೋದ ಕಾರಣ ಡೀಸೆಲ್ ಟ್ಯಾಂಕ್ ಬಳಿ ಬಿರುಕು ಬಿಟ್ಟಿತ್ತು. ಇದರಿಂದ ಸಮುದ್ರಕ್ಕೆ ಅಪಾರ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ ಎಂದು ಹೇಳಲಾಗಿದೆ.

ಡೀಸೆಲ್ ಸೋರಿಕೆ ನಿಯಂತ್ರಣಕ್ಕೆ ನವ ಮಂಗಳೂರು ಬಂದರು ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ. ಸಮುದ್ರಕ್ಕೆ ಸೋರಿಕೆಯಾಗಿರುವ ತೈಲವನ್ನು ಶುಚಿಗೊಳಿಸುವ ಕಾರ್ಯ ಕೂಡ ಆರಂಭಿಸಲಾಗಿದೆ.
ಬೃಹತ್ ನೌಕೆ ಬಂದರು ಪ್ರವೇಶಿಸುವಾಗ ಸಾಧಾರಣವಾಗಿ ಎರಡು ಟಗ್ ಗಳು ಬರ್ತ್ ವರೆಗೆ ಎಳೆದು ತರುತ್ತವೆ. ಆದರೆ ಈ ಅವಘಡ ಸಂಭವಿಸುವ ಸಂದರ್ಭದಲ್ಲಿ ಒಂದು ಟಗ್ ಮಾತ್ರ ಕಾರ್ಯನಿರ್ವಹಿಸುತ್ತಿತ್ತು.ಇದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಹೆಚ್ಚಿನ ಪರಿಣಿತಿ ಇಲ್ಲದ ಗುತ್ತಿಗೆ ಆಧಾರಿತ ಟೆಗ್ ಪೈಲಟ್ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ನೌಕೆ ಡೀಸೆಲ್ ಸಹಿತ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications