ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು, ದಕ್ಷಿಣ ಕನ್ನಡ, ಸೀಲ್ಡ್ ಡೌನ್: ಜಿಲ್ಲಾಡಳಿತದ ಸ್ಪಷ್ಟನೆ

|
Google Oneindia Kannada News

ಮಂಗಳೂರು, ಏಪ್ರಿಲ್ 10: ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೀಲ್ಡ್ ಡೌನ್ ಆಗಲಿದೆ ಎನ್ನುವ ಸುದ್ದಿಯ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಶುಕ್ರವಾರ ಬೆಳಗ್ಗೆಯಿಂದ ಜಿಲ್ಲೆ ಸೀಲ್ಡ್ ಡೌನ್ ಆಗಲಿದೆ ಎನ್ನುವ ಸುಳ್ಳು ಸುದ್ದಿಯಿಂದ, ಜನರು ಆತಂಕಗೊಂಡಿದ್ದರು. ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಜಿಲ್ಲಾಡಳಿತ "ಇದೊಂದು ಸುಳ್ಳು ಸುದ್ದಿ" ಎಂದು ಹೇಳಿದೆ.

ಕೊರೊನಾ ಕಡಿವಾಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೀಲ್ ಡೌನ್?ಕೊರೊನಾ ಕಡಿವಾಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೀಲ್ ಡೌನ್?

"ಈಗಾಗಲೇ ಲಾಕ್ ಡೌನ್ ಇರುವುದರಿಂದ, ಜಿಲ್ಲೆಯನ್ನು ಸಂಪೂರ್ಣವಾಗಿ ಸೀಲ್ಡ್ ಡೌನ್ ಮಾಡುವ ಯಾವ ಪ್ರಕ್ರಿಯೆಗಳೂ ನಡೆಯುತ್ತಿಲ್ಲ. ರಾಜ್ಯ ಸರಕಾರದಿಂದ ಯಾವ ಸುತ್ತೋಲೆಗಳೂ ಬಂದಿಲ್ಲ" ಎಂದು ಜಿಲ್ಲಾಡಳಿತ ಅತ್ಯಂತ ಸ್ಪಷ್ಟವಾಗಿ ಹೇಳಿದೆ.

District Administration Clarification Over Dakshina Kannada Sealed Down Rumours

"ಮುಂದಿನ ಕೆಲವು ದಿನ ಲಾಕ್ ಡೌನ್ ಮುಂದುವರಿಯಲಿದೆ. ಇದನ್ನೇ ನಾವು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದೇವೆಯೇ ಹೊರತು, ಸೀಲ್ಡ್ ಡೌನ್ ಇಲ್ಲ. ಜನರು ವದಂತಿಯನ್ನು ನಂಬಬೇಡಿ" ಎಂದು ಜಿಲ್ಲಾಡಳಿತ, ಸಾರ್ವಜನಿಕರಲ್ಲಿ ಮನವಿ ಮಾಡಿದೆ.

"ಸುದ್ದಿ ಪ್ರಸಾರ ಮಾಡುವ ಮೊದಲು, ಸಂಬಂಧ ಪಟ್ಟ ಇಲಾಖೆಯಿಂದ ದೃಢೀಕರಿಸಲು ಕೋರಲಾಗಿದೆ. ಆದರೂ, ಇಂತಹ ಸುಳ್ಳುಸುದ್ದಿಗಳು ಪ್ರಸಾರವಾಗುತ್ತಿವೆ. ಇದರಿಂದ, ಅನಗತ್ಯವಾಗಿ ಸಾರ್ವಜನಿಕರು ಗಾಭರಿಗೊಳಗಾಗುತ್ತಾರೆ" ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆಯನ್ನು ನೀಡಿದ್ದಾರೆ.

ಕಣ್ಣೂರಿನಿಂದ ಮಂಗಳೂರಿಗೆ ನಡೆದುಕೊಂಡೇ ಬಂದ ತುಂಬು ಗರ್ಭಿಣಿಕಣ್ಣೂರಿನಿಂದ ಮಂಗಳೂರಿಗೆ ನಡೆದುಕೊಂಡೇ ಬಂದ ತುಂಬು ಗರ್ಭಿಣಿ

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ತೆಗೆದುಕೊಂಡ ಕ್ರಮದ ರೀತಿಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳು ಸೀಲ್ಡ್ ಡೌನ್ ಆಗಲಿದೆ. ಇದರಿಂದ, ಸಾರ್ವಜನಿಕರಿಗೆ ದೈನಂದಿನ ಪದಾರ್ಥಗಳೂ ಸಿಗುವುದಿಲ್ಲ ಎನ್ನುವ ಸುದ್ದಿ ಶುಕ್ರವಾರ ಬೆಳಗ್ಗೆ, ದಟ್ಟವಾಗಿ ಜಿಲ್ಲೆಯಲ್ಲಿ ಹರಿದಾಡುತ್ತಿತ್ತು.

English summary
District Administration Clarification Over Dakshina Kannada Sealed Down Rumours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X