ವಿಡಿಯೋ: ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದ ನಲಪಾಡ್!
ಮಂಗಳೂರು, ಜುಲೈ 7: ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಮುಸುಕಿನ ಗುದ್ದಾಟ ನಡೆಯುತ್ತಿರುವಾಗಲೇ, ರಾಜ್ಯ ಯುವ ಕಾಂಗ್ರೆಸ್ನ ಭಾವೀ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮಾತ್ರ ಬಹಿರಂಗವಾಗಿಯೇ ಕಾಂಗ್ರೆಸ್ನ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಬಹಿರಂಗವಾಗಿಯೇ ಘೋಷಿಸಿದ್ದಾರೆ.
ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಮೊಹಮ್ಮದ್ ನಲಪಾಡ್, ಯುವ ಕಾರ್ಯಕರ್ತರೊಂದಿಗೆ ಮಲ್ಪೆ ಮೀನುಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿ, ಮೀನುಗಾರ ಮಹಿಳೆಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೀನುಗಾರ ಮಹಿಳೆಯರನ್ನು ಸಮಾಧಾನ ಪಡಿಸಿದ ನಲಪಾಡ್, "ಕಾಂಗ್ರೆಸ್ ನಿಮ್ಮೆಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡುತ್ತದೆ. ಎರಡು ವರ್ಷದ ಬಳಿಕ ಬರುವ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಿದರೆ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ,'' ಎಂದು ನಲಪಾಡ್ ಹೇಳಿದ್ದಾರೆ. ನಲಪಾಡ್ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕಾಂಗ್ರೆಸ್ನಿಂದ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆಗಳು ಈಗಾಗಲೇ ಕಾಂಗ್ರೆಸ್ನಲ್ಲಿ ಓಡಾಡುತ್ತಿದ್ದವು. ಶಾಸಕ ಜಮೀರ್ ಅಹ್ಮದ್ ಆರಂಭಿಸಿದ್ದ ಈ ಹೇಳಿಕೆಗೆ ಪಕ್ಷದಲ್ಲಿಯೇ ಪರ- ವಿರೋಧ ಚರ್ಚೆಗಳು ನಡೆದವು.
ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಹೇಳಿಕೆ ನೀಡುವವರಿಗೆ ನೋಟಿಸ್ ಜಾರಿ ಮಾಡಿ, ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದರು. ಚುನಾವಣೆ ಮುಗಿಯುವವರೆಗೂ ಮುಂದಿನ ಸಿಎಂ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ಕಡೆಯಿಂದಲೇ ಹೇಳಿಸಿದ್ದರು. ಕಾಂಗ್ರೆಸ್ನಲ್ಲಿ ಅಲ್ಪವಿರಾಮ ಬಿದ್ದಿತ್ತು. ಆದರೆ ಡಿ.ಕೆ. ಶಿವಕುಮಾರ್ ಜೊತೆ ಗುರುತಿಸಿಕೊಂಡಿರುವ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮುಂದಿನ ಸಿಎಂ ಡಿಕೆಶಿ ಎಂದು ಹೇಳಿ ಬಿರುಗಾಳಿ ಎಬ್ಬಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications