ಕಲ್ಲಡ್ಕ ಭಟ್ರೇ, ಮಂಗಳೂರು ಹಾಳು ಮಾಡಿದ್ದಾಯಿತು, ಬೆಂಗಳೂರಿನವರನ್ನಾದರೂ ನೆಮ್ಮದಿಯಿಂದ ಇರಲು ಬಿಡಿ
ಮಂಗಳೂರು, ಜ 13: ಸಂಘ ಪರಿವಾರ ಆಯೋಜಿಸಿದ್ದ 'ಕನಕಪುರ ಚಲೋ' ಕಾರ್ಯಕ್ರಮದ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.
"ಕಲ್ಲಡ್ಕ ಪ್ರಭಾಕರ ಭಟ್ರು ಇಲ್ಲಿಂದ, ಕನಕಪುರಕ್ಕೆ ಹೋಗಿ ಭಾಷಣ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿರುವ ಖಾದರ್, 'ಇದು ಕಲ್ಲಡ್ಕ ಭಟ್ರ ಸಣ್ಣಬುದ್ದಿಯನ್ನು ತೋರಿಸುತ್ತದೆ" ಎಂದು ಟೀಕಿಸಿದ್ದಾರೆ.
"ಮಂಗಳೂರಿನ ನೆಮ್ಮದಿ ಹಾಳು ಮಾಡಿದ್ದು ಸಾಕು. ಕೊನೆಯ ಪಕ್ಷ, ಕನಕಪುರ ಮತ್ತು ಬೆಂಗಳೂರಿನವರನ್ನಾದರೂ ನೆಮ್ಮದಿಯಿಂದ ಇರಲು ಬಿಡಿ" ಎಂದು, ವ್ಯಂಗ್ಯವಾಗಿ, ಖಾದರ್, ಕಲ್ಲಡ್ಕ ಭಟ್ರಲ್ಲಿ ಮನವಿ ಮಾಡಿದ್ದಾರೆ.

"ನೀವು ಕರಾವಳಿ ಭಾಗದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ, ಆಗಿರುವ ತೊಂದರೆಗಳೇ ಸಾಕು. ಇನ್ನು, ಅಲ್ಲಿಗೆ ಹೋಗಿ ಯಾಕೆ ಅಲ್ಲಿನ ಸಾಮರಸ್ಯ ಹಾಳು ಮಾಡುತ್ತೀರಾ" ಎಂದು ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ.
ರಾಮನಗರದ ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿಚಾರ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಪ್ರತಿಮೆ ನಿರ್ಮಾಣಕ್ಕೆ ಜಾಗ ನೀಡಿದ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಮೇಲೆ ಬಿಜೆಪಿ ನಾಯಕರು ಟೀಕಾ ಪ್ರಹಾರ ನಡೆಸಿದ್ದರು.
ಇದನ್ನು ಪ್ರತಿಭಟಿಸಿ ವಿವಿಧ ಹಿಂದೂಪರ ಸಂಘಟನೆಗಳು, ಜನವರಿ 13ರ ಸೋಮವಾರ 'ಕನಕಪುರ ಚಲೋ' ಕಾರ್ಯಕ್ರಮ ಆಯೋಜಿಸಿದ್ದು. ಇದರಲ್ಲಿ, ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications