ಮತಯಾಚನೆಗೂ ಷರತ್ತು ವಿಧಿಸಿ ಮನೆಮುಂದೆ ಬ್ಯಾನರ್ ಹಾಕಿದ ಸುಳ್ಯದ ವೈದ್ಯ
ಮಂಗಳೂರು ಮಾರ್ಚ್ 30: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರ ರೋಬ್ಬರು ಮತಯಾಚನೆಗೆ ಬರುವವರಿಗೆ ಕೆಲವು ಷರತ್ತು ಗಳನ್ನು ವಿಧಿಸಿದ ಅಪರೂಪದ ಪ್ರಸಂಗ ಸುಳ್ಯದಲ್ಲಿ ಬೆಳಕಿಗೆ ಬಂದಿದೆ. ತಾವು ಹೇಳುವ ಷರತ್ತು ಗಳಿಗೆ ಒಪ್ಪುವುದಾದರೆ ಮಾತ್ರ ಮನೆ ಅಂಗಳ ಪ್ರವೇಶಿಸಿ ಎಂದು ಬರೆಯಲಾದ ಬ್ಯಾನರ್ ಒಂದನ್ನು ಸುಳ್ಯದ ವೈದ್ಯರೊಬ್ಬರು ತಮ್ಮ ಮನೆ ಮುಂದೆ ನೇತು ಹಾಕಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸುಳ್ಯದ ಖ್ಯಾತ ಮಕ್ಕಳ ತಜ್ಞ ಡಾ ಬಿ ಎನ್ ಶ್ರೀಕೃಷ್ಣ ತಮ್ಮ ನಿವಾಸದ ಮುಂದೆ 'ನಾನು ಹೇಳುವ ಷರತ್ತುಗಳಿಗೆ ನೀವು ಒಪ್ಪುವುದಾದರೆ ಮಾತ್ರ ಮನೆಗೆ ಬಂದು ಮತ ಕೇಳಿ' . ಇಲ್ಲದಿದ್ದರೆ ಬರುವ ಅಗತ್ಯ ವಿಲ್ಲ ಎಂದು ಹೇಳುವಂತೆ ಬ್ಯಾನರ್ ನೇತುಹಾಕಿದ್ದಾರೆ. ಡಾ ಶ್ರೀ ಕೃಷ್ಣ ವರ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಸಾರ್ವಜನಿಕವಾಗಿಯೇ ತನ್ನ ನಿಲುವನ್ನು ಬಹಿರಂಗಪಡಿಸಿದ್ದ ಡಾ ಸ್ರೀ ಕೃಷ್ಣ , ಈ ಬಾರಿ ಮನೆಯ ಮುಂದೆ ನೇತು ಹಾಕಿರುವ ಬ್ಯಾನರ್ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿ ಅಥವಾ ಪಕ್ಷದ ಕಾರ್ಯಕರ್ತರಿಗೆ ಡಾ ಬಿ ಎನ್ ಶ್ರೀ ಕೃಷ್ಣ ವಿಧಿಸಿದ ಷರತ್ತುಗಳು ಹೀಗಿವೆ.
ಪಕ್ಷದ ಚುನಾವಣಾ ಪ್ರಣಾಳಿಕೆಯ ಅನುಷ್ಠಾನ, ರಾಷ್ಟ್ರ ರಕ್ಷಣೆ ಮತ್ತು ಹಿತಾಸಕ್ತಿ ಬಗೆಗಿನ ಬದ್ಧತೆ, ಸಂಸ್ಕೃತಿ ಮತ್ತು ಪರಂಪರೆಗೆ ಬದ್ಧತೆ, ದ್ವಂದ್ವ ನೀತಿ ಸಲ್ಲ, ಅಪರಾಧಿಗಳು, ಉಗ್ರರು, ದೇಶದ್ರೋಹಿಗಳು, ಭ್ರಷ್ಟಾಚಾರಿಗಳನ್ನು ಬೆಂಬಲ ಇಲ್ಲ, ಭ್ರಷ್ಟಾಚಾರ ಇಲ್ಲ, ದುಷ್ಟದ್ರವ್ಯ ಮುಟ್ಟಲಾರೆ, ಎಲ್ಲರ ಕಡೆಗೂ ಸಮಾನ ದೃಷ್ಟಿ, ಪಕ್ಷಪಾತ ರಹಿತ ಧೋರಣೆ, ಸ್ವಚ್ಛತಾ ಅಭಿಯಾನದಲ್ಲಿ ಕ್ರಿಯಾತ್ಮಕ ಭಾಗವಹಿಸುವಿಕೆ, ಗೋ ರಕ್ಷಣೆ, ಗೋಹತ್ಯೆ ನಿಷೇಧ, ಜನಸೇವೆಯ ಸೋಗಿನಲ್ಲಿ ದ್ವಂದ್ವ ನೀತಿ ಇಲ್ಲ, ಜನರ ಬೇಡಿಕೆ ಮತ್ತು ಭಾವನೆಗಳಿಗೆ ಸ್ಪಂದನೆ.

ಇಷ್ಟು ಷರತ್ತು ಗಳಿಗೆ ನಾನು ಮತ್ತು ನನ್ನ ಪಕ್ಷ ಬದ್ಧ ಎನ್ನುವ ಭರವಸೆ ನೀಡುವವರು ಮಾತ್ರ ಮತ ಕೇಳಲು ಮನೆಗೆ ಬರಬಹುದು ಎಂದು ಡಾ ಬಿ ಎನ್ ಶ್ರೀ ಕೃಷ್ಣ ಬ್ಯಾನರ್ನಲ್ಲಿ ಹೇಳಲಾಗಿದೆ.ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಡಾ ಶ್ರೀ ಕೃಷ್ಣ ಬ್ಯಾನರ್ ಒಂದನ್ನು ಮನೆಯ ಮುಂದೆ ನೇತುಹಾಕಿದ್ದರು .
ಅದರಲ್ಲಿ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳಿಗೆ ಆದ್ಯತೆ ನೀಡಿದ್ದರು. ಕನ್ನಡ ಭಾಷೆ, ಸಂಸ್ಕೃತಿಗೆ ಬದ್ಧನಾಗಿರಬೇಕು, ದ್ವಂದ್ವ ನೀತಿ ಅನುಸರಿಸಲಾರೆ, ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಪ್ರಾಥಮಿಕ ಶಾಲಾ ಶಿಕ್ಷಣ ಕೊಡಿಸುತ್ತೇನೆ ಮತ್ತಿತರ ಷರತ್ತುಗಳನ್ನು ಒಪ್ಪಬೇಕು ಎಂದು ಆ ಬ್ಯಾನರ್ನಲ್ಲಿ ಮುದ್ರಿಸಿ ಮನೆ ಮುಂದೆ ನೇತುಹಾಕಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications