ಸುಡುವ ಡಾಂಬರ್ ಡಬ್ಬಕ್ಕೆ ಬಿದ್ದ ನಾಯಿಗೆ ಸಿಕ್ಕಿತು ಮರುಜನ್ಮ!
ಮಂಗಳೂರು, ಸೆಪ್ಟೆಂಬರ್.18: ಬೇಸಿಗೆ ಮುನ್ನವೇ ಬಿಸಿಲ ಝಳ ಕರಾವಳಿಯಲ್ಲಿ ಹೆಚ್ಚುತ್ತಿದೆ. ಮಾರ್ಚ್ ಕೊನೆವಾರದಾಚೆಗೆ ಸುಡುಬಿಸಿಲು ಕಾಣಬೇಕಾದ ಕರಾವಳಿಯಲ್ಲಿ ಮಳೆ ಕಡಿಮೆಯಾಗಿ 20 ದಿನಗಳು ಉರುಳುವ ಮುನ್ನವೇ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಗೆ ಏರಿದೆ . ಬಿರು ಬಿಸಿಲಿಗೆ ರಸ್ತೆಗೆ ಹಾಕಲಾದ ಡಾಂಬರ್ ಕೂಡ ಕರಗುತ್ತಿದೆ.
ಈ ನಡುವೆ ರಸ್ತೆ ಬದಿಯ ಡಾಂಬರು ಡಬ್ಬಿಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಯಿಯನ್ನು ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ಸಿಬ್ಬಂದಿ ರಕ್ಷಿಸಿದ್ದಾರೆ.
ಘಟನೆಯ ವಿವರ:
ಮಂಗಳೂರು ನಗರ ಹೊರವಲಯದ ಬಜ್ಪೆ ಬಳಿ ರಸ್ತೆ ಡಾಂಬರೀಕರಣಕ್ಕಾಗಿ ಡಾಂಬರು ಡಬ್ಬಿಗಳನ್ನು ಇಡಲಾಗಿತ್ತು. ಈ ವೇಳೆ ಬೀದಿ ನಾಯಿಯೊಂದು ಆಕಸ್ಮಿಕವಾಗಿ ಡಾಂಬರು ಡಬ್ಬಿ ಒಳಗೆ ಬಿದ್ದಿದೆ.

ಬಿಸಿಲಿಗೆ ಕರಗಿದ ಬಿಸಿ ಡಾಂಬರ್ ಡಬ್ಬಕ್ಕೆ ಬಿದ್ದ ನಾಯಿಯ ಮೈ ತುಂಬ ಡಾಂಬರ್ ಅಂಟಿಕೊಂಡಿದೆ. ಅತ್ತ ಹೊರಬರಲಾಗದೇ ಇತ್ತ ಬಿಸಿ ಡಾಂಬರನ್ನು ಸಹಿಸಲಾಗದೇ ನಾಯಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು .
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಕ್ತಿ ನಗರದ ಅನಿಮಲ್ ಕೇರ್ ಟ್ರಸ್ಟ್ ಸದಸ್ಯರು, ಡಾಂಬರಿನಲ್ಲಿ ಅದ್ದಿ ಹೋಗಿದ್ದ ನಾಯಿಯನ್ನು ಮೇಲೆತ್ತಿದ್ದಾರೆ.

ಕೂಡಲೇ ತಮ್ಮ ಶಕ್ತಿನಗರದ ಅನಿಮಲ್ ಕೇರ್ ಸೆಂಟರಿಗೆ ಕೊಂಡೊಯ್ದು ಸುಮಾರು ಹತ್ತು ಲೀಟರ್ನಷ್ಟು ಅಡುಗೆ ಎಣ್ಣೆಯನ್ನು ನಾಯಿಯ ಮೈಗೆ ಸುರಿದಿದ್ದಾರೆ. ನಿಧಾನಕ್ಕೆ

ನಾಯಿ ಮೈಯಲ್ಲಿ ಅಂಟಿದ್ದ ಹತ್ತು ಕೆಜಿಯಷ್ಟು ಡಾಂಬರನ್ನು ಬಟ್ಟೆಯಿಂದ ಉಜ್ಜಿ ತೆಗೆದಿದ್ದಾರೆ. ಸದ್ಯ ನಾಯಿ ಚೇತರಿಕೆ ಕಂಡಿದ್ದು ಮರುಜನ್ಮ ಪಡೆದಂತಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications